<p><strong>ಹೊಳೆಹೊನ್ನೂರು</strong>: ‘ಜಾನಪದ ಎಲ್ಲರ ಹಿತ ಬಯಸುತ್ತದೆ. ಇಂದಿನ ಆಧುನಿಕ ಜೀವನ ಶೈಲಿಯಿಂದಾಗಿ ಅಭಿವೃದ್ಧಿಯ ಓಟದಲ್ಲಿ ಜಾನಪದ ಸಾರಿದ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದೇವೆ. ನಶಿಸಿಹೋಗುತ್ತಿರುವ ಈ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದರು.</p>.<p>ಪಟ್ಟಣದ ಸರ್ಕಾರಿ ಪ್ರಮಥ ದರ್ಜೆ ಕಾಲೇಜಿನಲ್ಲಿ ಸೇವಾ ಯೋಜನಾ ಘಟಕ, ಸಾಂಸ್ಕೃತಿಕ ವೇದಿಕೆ, ಕನ್ನಡ ವಿಭಾಗ ಹಾಗೂ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದಲ್ಲಿ ಆಯೋಜಿಸಿದ್ದ ‘ಕನ್ನಡ ಜಾನಪದ ವೈಭವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಮ್ಮ ವರ್ತಮಾನದ ಬದುಕನ್ನು ಹಸನುಗೊಳಿಸಬೇಕಾದರೆ ಜಾನಪದದ ಬೇರುಗಳನ್ನು ಅರಿಯುವ ಅಗತ್ಯವಿದೆ. ಜಾನಪದ ಪರಂಪರೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ’ ಎಂದು ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಡಾ.ಭಾರತಿ ದೇವಿ.ಪಿ ಹೇಳಿದರು. </p>.<p>ಹೊಳೆನರಸೀಪುರದ ಖ್ಯಾತ ಜನಪದ ಕಲಾವಿದ ಪಂಪಾಪತಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಜನಪದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.</p>.<p>ಜಿಲ್ಲಾ ಕನ್ನಡ ಜಾನಪದ ಪರಿಷತ್, ಶಿವಮೊಗ್ಗದ ಅಧ್ಯಕ್ಷ ಡಾ.ಎಂ.ವೆಂಕಟೇಶ್, ಸದಸ್ಯ ಕವಿತಾ ಸುಧೀಂದ್ರ, ಪ್ರೊ. ಪ್ರಕಾಶ್ ಎನ್.ಕೆ, ಡಾ. ಡಿ.ವಿ.ಶಿವರುದ್ರಪ್ಪ, ಕಾಲೇಜಿನ ನಿವೃತ್ತ ಅಧೀಕ್ಷಕ ಮಹದೇವ ಅವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆಹೊನ್ನೂರು</strong>: ‘ಜಾನಪದ ಎಲ್ಲರ ಹಿತ ಬಯಸುತ್ತದೆ. ಇಂದಿನ ಆಧುನಿಕ ಜೀವನ ಶೈಲಿಯಿಂದಾಗಿ ಅಭಿವೃದ್ಧಿಯ ಓಟದಲ್ಲಿ ಜಾನಪದ ಸಾರಿದ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದೇವೆ. ನಶಿಸಿಹೋಗುತ್ತಿರುವ ಈ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದರು.</p>.<p>ಪಟ್ಟಣದ ಸರ್ಕಾರಿ ಪ್ರಮಥ ದರ್ಜೆ ಕಾಲೇಜಿನಲ್ಲಿ ಸೇವಾ ಯೋಜನಾ ಘಟಕ, ಸಾಂಸ್ಕೃತಿಕ ವೇದಿಕೆ, ಕನ್ನಡ ವಿಭಾಗ ಹಾಗೂ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದಲ್ಲಿ ಆಯೋಜಿಸಿದ್ದ ‘ಕನ್ನಡ ಜಾನಪದ ವೈಭವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಮ್ಮ ವರ್ತಮಾನದ ಬದುಕನ್ನು ಹಸನುಗೊಳಿಸಬೇಕಾದರೆ ಜಾನಪದದ ಬೇರುಗಳನ್ನು ಅರಿಯುವ ಅಗತ್ಯವಿದೆ. ಜಾನಪದ ಪರಂಪರೆಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ’ ಎಂದು ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಡಾ.ಭಾರತಿ ದೇವಿ.ಪಿ ಹೇಳಿದರು. </p>.<p>ಹೊಳೆನರಸೀಪುರದ ಖ್ಯಾತ ಜನಪದ ಕಲಾವಿದ ಪಂಪಾಪತಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಜನಪದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.</p>.<p>ಜಿಲ್ಲಾ ಕನ್ನಡ ಜಾನಪದ ಪರಿಷತ್, ಶಿವಮೊಗ್ಗದ ಅಧ್ಯಕ್ಷ ಡಾ.ಎಂ.ವೆಂಕಟೇಶ್, ಸದಸ್ಯ ಕವಿತಾ ಸುಧೀಂದ್ರ, ಪ್ರೊ. ಪ್ರಕಾಶ್ ಎನ್.ಕೆ, ಡಾ. ಡಿ.ವಿ.ಶಿವರುದ್ರಪ್ಪ, ಕಾಲೇಜಿನ ನಿವೃತ್ತ ಅಧೀಕ್ಷಕ ಮಹದೇವ ಅವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>