<p><strong>ಹೊಳೆಹೊನ್ನೂರು</strong>: ಸಮೀಪದ ಮೂಡಲ ವಿಠಲಾಪುರ ಗ್ರಾಮದಲ್ಲಿ ಭಾನುವಾರ ಹಳೆ ದ್ವೇಷದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದೆ. ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಆನವೇರಿ ಗ್ರಾಮದ ತೌಫಿಕ್ (32) ಕೈಗೆ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಶಿವಮೊಗ್ಗದ ಟಿಪ್ಪು ನಗರದ ಮುಬಾರಕ್, ಫೌಹಾದ್, ತೋಹಿಬ್ ಹಾಗೂ ತನ್ವೀರ್ ಬಂಧಿತರು. ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಿಂದ ಕಾರ್ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ದನ ಕಳ್ಳ ಸಾಗಾಣೆ ದಂಧೆಯಲ್ಲಿ ತೊಡಗಿರುವ ಗುಂಪಿನ ಚಟುವಟಿಕೆ ಬಗ್ಗೆ ಈ ಹಿಂದೆ ತೌಫಿಕ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಕಾರಣಕ್ಕೆ ಶಿವಮೊಗ್ಗದಿಂದ ಹಿಂಬಾಲಿಸಿಕೊಂಡು ಬಂದಿದ್ದು, ಮೂಡಲ ವಿಠಲಾಪುರ ಗ್ರಾಮದ ಹೊಟೇಲ್ನಲ್ಲಿ ಉಪಾಹಾರ ಸೇವಿಸುತ್ತಿದ್ದಾಗ ಆರೋಪಿಗಳು ಕೊಲೆ ಮಾಡಲು ಮುಂದಾಗಿದ್ದರು. ಹೋಟೆಲ್ಗೆ ಬಂದ ಆರ್ಎಸ್ಎಸ್ ಗಣವೇಷಧಾರಿಗಳನ್ನು ಪೊಲೀಸರೆಂದು ಭಾವಿಸಿ ಆರೋಪಿಗಳು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆಹೊನ್ನೂರು</strong>: ಸಮೀಪದ ಮೂಡಲ ವಿಠಲಾಪುರ ಗ್ರಾಮದಲ್ಲಿ ಭಾನುವಾರ ಹಳೆ ದ್ವೇಷದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದೆ. ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಆನವೇರಿ ಗ್ರಾಮದ ತೌಫಿಕ್ (32) ಕೈಗೆ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಶಿವಮೊಗ್ಗದ ಟಿಪ್ಪು ನಗರದ ಮುಬಾರಕ್, ಫೌಹಾದ್, ತೋಹಿಬ್ ಹಾಗೂ ತನ್ವೀರ್ ಬಂಧಿತರು. ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಿಂದ ಕಾರ್ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ದನ ಕಳ್ಳ ಸಾಗಾಣೆ ದಂಧೆಯಲ್ಲಿ ತೊಡಗಿರುವ ಗುಂಪಿನ ಚಟುವಟಿಕೆ ಬಗ್ಗೆ ಈ ಹಿಂದೆ ತೌಫಿಕ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಕಾರಣಕ್ಕೆ ಶಿವಮೊಗ್ಗದಿಂದ ಹಿಂಬಾಲಿಸಿಕೊಂಡು ಬಂದಿದ್ದು, ಮೂಡಲ ವಿಠಲಾಪುರ ಗ್ರಾಮದ ಹೊಟೇಲ್ನಲ್ಲಿ ಉಪಾಹಾರ ಸೇವಿಸುತ್ತಿದ್ದಾಗ ಆರೋಪಿಗಳು ಕೊಲೆ ಮಾಡಲು ಮುಂದಾಗಿದ್ದರು. ಹೋಟೆಲ್ಗೆ ಬಂದ ಆರ್ಎಸ್ಎಸ್ ಗಣವೇಷಧಾರಿಗಳನ್ನು ಪೊಲೀಸರೆಂದು ಭಾವಿಸಿ ಆರೋಪಿಗಳು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>