<p>ಹೊಳೆಹೊನ್ನೂರು: ‘ಪರಸ್ಪರ ಪರೋಪಕಾರ ಗುಣ ಬೆಳೆಸಿಕೊಂಡರೆ ಮಾನವ ಜನ್ಮ ಸಾರ್ಥಕವಾಗುತ್ತದೆ’ ಎಂದು ಚನ್ನಗಿರಿ ಕೇದಾರ ಹಿರೇಮಠದ ಕೇದಾರಲಿಂಗ ಶಿವ ಶಾಂತವೀರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ಕಲ್ಲಿಹಾಳ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಆಂಜನೇಯಸ್ವಾಮಿ ನೂತನ ದೇವಾಲಯ ಪ್ರವೇಶ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಗೋಪುರ ಕಳಸಾರೋಹಣ ಹಾಗೂ ಗರುಡಗಂಬ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ದೈವಾರಾಧನೆಯನ್ನು ಎಂದಿಗೂ ಕೈ ಬಿಡಬಾರದು. ಊರ ಹಬ್ಬ ಸೇರಿ ಸಂಭ್ರಮಾಚರಣೆಗಳು ಗ್ರಾಮದ ಒಗ್ಗಟ್ಟನ್ನು ತೋರಿಸುತ್ತವೆ’ ಎಂದು ಶಾಸಕಿ ಶಾರದಾ ಪೂರ್ಯಾನಾಯ್ಕ ಹೇಳಿದರು.</p>.<p>ಶಾಸಕ ಡಾ.ಧನಂಜಯ ಸರ್ಜಿ, ಎಚ್.ವಾಸು, ಎಚ್.ಎಲ್. ಷಡಾಕ್ಷರಿ, ಸಿ.ಹನುಮಂತು, ಅಜಯ್ ಕುಮಾರ್, ಆರ್.ಉಮೇಶ್, ಶ್ರೀನಿವಾಸ್ ಕರಿಯಣ್ಣ, ಆರ್.ಮಂಜುನಾಥ್, ಪಿ.ಎಚ್. ಚಂದ್ರಪ್ಪ, ಶಿವಕುಮಾರ್, ರುದ್ರಮುನಿ, ಹಾಲಪ್ಪ, ಕೃಷ್ಣಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-42-4193198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆಹೊನ್ನೂರು: ‘ಪರಸ್ಪರ ಪರೋಪಕಾರ ಗುಣ ಬೆಳೆಸಿಕೊಂಡರೆ ಮಾನವ ಜನ್ಮ ಸಾರ್ಥಕವಾಗುತ್ತದೆ’ ಎಂದು ಚನ್ನಗಿರಿ ಕೇದಾರ ಹಿರೇಮಠದ ಕೇದಾರಲಿಂಗ ಶಿವ ಶಾಂತವೀರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ಕಲ್ಲಿಹಾಳ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಆಂಜನೇಯಸ್ವಾಮಿ ನೂತನ ದೇವಾಲಯ ಪ್ರವೇಶ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಗೋಪುರ ಕಳಸಾರೋಹಣ ಹಾಗೂ ಗರುಡಗಂಬ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ದೈವಾರಾಧನೆಯನ್ನು ಎಂದಿಗೂ ಕೈ ಬಿಡಬಾರದು. ಊರ ಹಬ್ಬ ಸೇರಿ ಸಂಭ್ರಮಾಚರಣೆಗಳು ಗ್ರಾಮದ ಒಗ್ಗಟ್ಟನ್ನು ತೋರಿಸುತ್ತವೆ’ ಎಂದು ಶಾಸಕಿ ಶಾರದಾ ಪೂರ್ಯಾನಾಯ್ಕ ಹೇಳಿದರು.</p>.<p>ಶಾಸಕ ಡಾ.ಧನಂಜಯ ಸರ್ಜಿ, ಎಚ್.ವಾಸು, ಎಚ್.ಎಲ್. ಷಡಾಕ್ಷರಿ, ಸಿ.ಹನುಮಂತು, ಅಜಯ್ ಕುಮಾರ್, ಆರ್.ಉಮೇಶ್, ಶ್ರೀನಿವಾಸ್ ಕರಿಯಣ್ಣ, ಆರ್.ಮಂಜುನಾಥ್, ಪಿ.ಎಚ್. ಚಂದ್ರಪ್ಪ, ಶಿವಕುಮಾರ್, ರುದ್ರಮುನಿ, ಹಾಲಪ್ಪ, ಕೃಷ್ಣಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-42-4193198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>