<p>ಹೊಳೆಹೊನ್ನೂರು: ಸ್ಥಳೀಯ ಪಟ್ಟಣ ಪಂಚಾಯಿತಿಗೆ ಒಳಪಟ್ಟ ನಿವೇಶನವನ್ನು ಅಕ್ರಮವಾಗಿ ವ್ಯಕ್ತಿಯೊಬ್ಬರಿಗೆ ಖಾತೆ ಮಾಡುವುದನ್ನು ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು ಶುಕ್ರವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಂತೆ ಹೊಳೆಹೊನ್ನೂರಿನ ಆಸ್ತಿ ನಂ.452/2ರಲ್ಲಿ 40x50 ಅಡಿ ವಿಸ್ತೀರ್ಣದ ನಿವೇಶನ ಇದೆ. ಈ ನಿವೇಶನ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಖಾತೆ ಮಾಡಿಕೊಡುವ ಸಂಬಂಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಹಿಂದೆ<br />ನಡೆಸಿದ ಪಂಚಾಯಿತಿ ಸಭೆಯಲ್ಲಿ ಪಂಚಾಯಿತಿ ಸದಸ್ಯರ ವಿರೋಧ ಇರುವ ಬಗ್ಗೆ ಠರಾವು ಪುಸ್ತಕದಲ್ಲಿ ದಾಖಲಾಗಿದೆ.</p>.<p>ಪರಿಶೀಲನೆ ನಡೆಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮೇಲಧಿಕಾರಿ ಪತ್ರ ಬರೆದಿದ್ದಾರೆ. ಆದರೆ ಈ ಎಲ್ಲವನ್ನು ಉಲ್ಲಂಘನೆ ಮಾಡಿ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಅಕ್ರಮವಾಗಿ ಖಾತೆ ಮಾಡಿಕೊಡಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಬಳಿಕ ಯಾವುದೇ ವ್ಯಕ್ತಿಗೆ ಖಾತೆ ಮಾಡಿಕೊಡದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮುಖ್ಯಾಧಿಕಾರಿ ಎಸ್.ಸತ್ಯನಾರಾಯಣರಾವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಸತ್ಯನಾರಾಯಣರಾವ್, ಮೇಲಧಿಕಾರಿ ಗಳ ಗಮನಕ್ಕೆ ತಂದು ಅವರ ಸೂಚನೆ ಮೇರೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.</p>.<p>ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಉಮೇಶ್, ಮಾಜಿ ಉಪಾಧ್ಯಕ್ಷ ಎಂ.ನಾಗೇಶ್, ಎ.ನಾಗೇಶ್, ಮಾಜಿ ಸದಸ್ಯ ಎಚ್.ಎಸ್.ಬಿಂದು, ಆರ್.ರಮೇಶ್, ಡಣಾಯಕಪುರದ ಪರಮೇಶ್ವರಪ್ಪ ಗೌಡ, ಎನ್.ಚಂದ್ರಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆಹೊನ್ನೂರು: ಸ್ಥಳೀಯ ಪಟ್ಟಣ ಪಂಚಾಯಿತಿಗೆ ಒಳಪಟ್ಟ ನಿವೇಶನವನ್ನು ಅಕ್ರಮವಾಗಿ ವ್ಯಕ್ತಿಯೊಬ್ಬರಿಗೆ ಖಾತೆ ಮಾಡುವುದನ್ನು ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು ಶುಕ್ರವಾರ ಸಂಜೆ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಂತೆ ಹೊಳೆಹೊನ್ನೂರಿನ ಆಸ್ತಿ ನಂ.452/2ರಲ್ಲಿ 40x50 ಅಡಿ ವಿಸ್ತೀರ್ಣದ ನಿವೇಶನ ಇದೆ. ಈ ನಿವೇಶನ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಖಾತೆ ಮಾಡಿಕೊಡುವ ಸಂಬಂಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಹಿಂದೆ<br />ನಡೆಸಿದ ಪಂಚಾಯಿತಿ ಸಭೆಯಲ್ಲಿ ಪಂಚಾಯಿತಿ ಸದಸ್ಯರ ವಿರೋಧ ಇರುವ ಬಗ್ಗೆ ಠರಾವು ಪುಸ್ತಕದಲ್ಲಿ ದಾಖಲಾಗಿದೆ.</p>.<p>ಪರಿಶೀಲನೆ ನಡೆಸಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮೇಲಧಿಕಾರಿ ಪತ್ರ ಬರೆದಿದ್ದಾರೆ. ಆದರೆ ಈ ಎಲ್ಲವನ್ನು ಉಲ್ಲಂಘನೆ ಮಾಡಿ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಅಕ್ರಮವಾಗಿ ಖಾತೆ ಮಾಡಿಕೊಡಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಬಳಿಕ ಯಾವುದೇ ವ್ಯಕ್ತಿಗೆ ಖಾತೆ ಮಾಡಿಕೊಡದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮುಖ್ಯಾಧಿಕಾರಿ ಎಸ್.ಸತ್ಯನಾರಾಯಣರಾವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಸತ್ಯನಾರಾಯಣರಾವ್, ಮೇಲಧಿಕಾರಿ ಗಳ ಗಮನಕ್ಕೆ ತಂದು ಅವರ ಸೂಚನೆ ಮೇರೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.</p>.<p>ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಉಮೇಶ್, ಮಾಜಿ ಉಪಾಧ್ಯಕ್ಷ ಎಂ.ನಾಗೇಶ್, ಎ.ನಾಗೇಶ್, ಮಾಜಿ ಸದಸ್ಯ ಎಚ್.ಎಸ್.ಬಿಂದು, ಆರ್.ರಮೇಶ್, ಡಣಾಯಕಪುರದ ಪರಮೇಶ್ವರಪ್ಪ ಗೌಡ, ಎನ್.ಚಂದ್ರಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>