<p><strong>ಹೊಳೆಹೊನ್ನೂರು:</strong> ಇತ್ತೀಚೆಗೆ ಹೆಚ್ಚಿನ ಯುವಕರು ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭದ್ರಾವತಿ ತಾಲ್ಲೂಕು -2ರ ಯೋಜನಾಧಿಕಾರಿ ಅಜಯ್ ಕುಮಾರ್ ಹೇಳಿದರು. </p>.<p>ಪಟ್ಟಣ ಸಮೀಪದ ಕಲ್ಲಿಹಾಳ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕೈಮರ ವಲಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮಾದಕ ವಸ್ತು ವಿರೋಧಿ ಕಾರ್ಯಕ್ರಮದಲ್ಲಿ ಮಾತನಾಡಿದರು. </p>.<p>‘ಇಂದಿನ ಯುವ ಜನತೆಯು ಮೋಜು, ಮಸ್ತಿ, ತಡರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನೇ ಬದಲಾಯಿಸಿಕೊಂಡಿದ್ದಾರೆ. ಇದರಿಂದ ಹದಿಹರೆಯದಲ್ಲಿ ಹಾದಿ ತಪ್ಪುವುದು ಸಾಮಾನ್ಯವಾಗಿದೆ. ಮಾದಕ ವ್ಯಸನದಿಂದ ರಕ್ಷಿಸಲು ಹಾಗೂ ಈ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ರತಿ ವರ್ಷ ಅಂತರರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನ ಆಚರಿಸಲಾಗುತ್ತಿದೆ’ ಎಂದರು. </p>.<p>ಭದ್ರಾವತಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪಿಎಚ್ಒ ಸುಶೀಲಾ ಬಾಯಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ‘ಜಿಲ್ಲಾ ಜನಜಾಗೃತಿ ವೇದಿಕೆ’ಯ ಉಪಾಧ್ಯಕ್ಷ ಯಡೇಹಳ್ಳಿ ಎಂ.ಪಾಲಾಕ್ಷಪ್ಪ ಉದ್ಘಾಟಿಸಿದರು. </p>.<p>ಸಿಆರ್ಪಿ ರಂಗನಾಥ್, ಪ್ರೌಢಶಾಲೆ ಮುಖ್ಯಶಿಕ್ಷಕ ಆರ್.ಸತೀಶ, ಮೇಲ್ವಿಚಾರಕ ಮಂಜುನಾಥ ತಾಲ್ಲೂಕು ಕೃಷಿ ಅಧಿಕಾರಿ ಆರ್.ಸುನೀಲ್, ಸೇವಾ ಪ್ರತಿನಿಧಿ ರಮ್ಯಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆಹೊನ್ನೂರು:</strong> ಇತ್ತೀಚೆಗೆ ಹೆಚ್ಚಿನ ಯುವಕರು ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭದ್ರಾವತಿ ತಾಲ್ಲೂಕು -2ರ ಯೋಜನಾಧಿಕಾರಿ ಅಜಯ್ ಕುಮಾರ್ ಹೇಳಿದರು. </p>.<p>ಪಟ್ಟಣ ಸಮೀಪದ ಕಲ್ಲಿಹಾಳ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕೈಮರ ವಲಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮಾದಕ ವಸ್ತು ವಿರೋಧಿ ಕಾರ್ಯಕ್ರಮದಲ್ಲಿ ಮಾತನಾಡಿದರು. </p>.<p>‘ಇಂದಿನ ಯುವ ಜನತೆಯು ಮೋಜು, ಮಸ್ತಿ, ತಡರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನೇ ಬದಲಾಯಿಸಿಕೊಂಡಿದ್ದಾರೆ. ಇದರಿಂದ ಹದಿಹರೆಯದಲ್ಲಿ ಹಾದಿ ತಪ್ಪುವುದು ಸಾಮಾನ್ಯವಾಗಿದೆ. ಮಾದಕ ವ್ಯಸನದಿಂದ ರಕ್ಷಿಸಲು ಹಾಗೂ ಈ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ರತಿ ವರ್ಷ ಅಂತರರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನ ಆಚರಿಸಲಾಗುತ್ತಿದೆ’ ಎಂದರು. </p>.<p>ಭದ್ರಾವತಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪಿಎಚ್ಒ ಸುಶೀಲಾ ಬಾಯಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ‘ಜಿಲ್ಲಾ ಜನಜಾಗೃತಿ ವೇದಿಕೆ’ಯ ಉಪಾಧ್ಯಕ್ಷ ಯಡೇಹಳ್ಳಿ ಎಂ.ಪಾಲಾಕ್ಷಪ್ಪ ಉದ್ಘಾಟಿಸಿದರು. </p>.<p>ಸಿಆರ್ಪಿ ರಂಗನಾಥ್, ಪ್ರೌಢಶಾಲೆ ಮುಖ್ಯಶಿಕ್ಷಕ ಆರ್.ಸತೀಶ, ಮೇಲ್ವಿಚಾರಕ ಮಂಜುನಾಥ ತಾಲ್ಲೂಕು ಕೃಷಿ ಅಧಿಕಾರಿ ಆರ್.ಸುನೀಲ್, ಸೇವಾ ಪ್ರತಿನಿಧಿ ರಮ್ಯಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>