ಶಿವಮೊಗ್ಗ: ವಿಶ್ವಹಿಂದೂ ಪರಿಷತ್ ಕೋಟೆ ಪ್ರಖಂಡದ ಸಹ ಕಾರ್ಯದರ್ಶಿ ಹರ್ಷ ಕೊಲೆಯ ನಂತರ ನಗರದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಶಾಲಾ ಕಾಲೇಜುಗಳಿಗೆ ಫೆ. 21 ಜಿಲ್ಲಾಡಳಿತ ರಜೆ ಘೋಷಿಸಿದೆ.
ಘಟನೆಯ ನಂತರ ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಕೆಲವೆಡೆ ಕಿಡಿಗೇಡಿಗಳು ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲುತೂರಾಟ ನಡೆಸಿ, ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ.