<p><strong>ರಿಪ್ಪನ್ಪೇಟೆ:</strong> ಸಮೀಪದ ಹೊಂಬುಜ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಆರು ದಿನಗಳಿಂದ ನಡೆಯುತ್ತಿದ್ದ ವಿಜೃಂಭಣೆಯ ಮಹಾ ರಥೋತ್ಸವಕ್ಕೆ ಶನಿವಾರ ಧ್ವಜಾರೋಹಣ ಹಾಗೂ ಕುಂಕುಮೋತ್ಸವದ ಓಕಳಿಯೊಂದಿಗೆ ತೆರೆ ಬಿದ್ದಿತು.</p>.<p>ಮಠದ ಪೀಠಾಧೀಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ವಿವಿಧ ಆರಾಧನೆಗಳು, ನಾಗವಾಹನೋತ್ಸವ, ಸಿಂಹವಾಹನೋತ್ಸವ, ಬೆಳ್ಳಿ ರಥೋತ್ಸವ, ಪುಷ್ಪರಥೋತ್ಸವ ಹಾಗೂ ಪುರೋಹಿತರಾದ ಪದ್ಮರಾಜ ಇಂದ್ರ ಮತ್ತು ಸಹಪುರೋಹಿತ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನೆರವೇರಿದರು.</p>.<p>ಪಲ್ಲಕ್ಕಿಯಲ್ಲಿ ಅವಭೃತ ಜಿನಬಿಂಬಗಳನ್ನು ನಗರದ ರಾಜಬೀದಿಯಿಂದ ಸಾಲಂಕೃತ ಶೋಭಾಯಾತ್ರೆಯಲ್ಲಿ ಜಿನಸ್ತುತಿಯೊಂದಿಗೆ ತರಲಾಯಿತು.</p>.<p>ಅಗ್ರೋದಕವನ್ನು ಕುಮದ್ವತಿ ತೀರ್ಥದಿಂದ ಸನ್ನಿಧಿಗೆ ಅರ್ಪಿಸಲಾಯಿತು. ಯಕ್ಷಿ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಶಾಸ್ತ್ರೋಕ್ತ ಪೂಜೆ ಸಲ್ಲಿಸಲಾಯಿತು. ಪದ್ಮಾವತಿ ಮಹಿಳಾ ಮಂಡಳ ಹಾಗೂ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಆಗಮಿಸಿದ ಭಕ್ತರು ಕುಂಕುಮೋತ್ಸವದಲ್ಲಿ ಭಾಗಿಯಾಗಿ ಭಕ್ತಿ ಸಮರ್ಪಿಸಿದರು.</p>.<p>ಮಹಾರಥೋತ್ಸವಕ್ಕೆ ಸಹಕರಿಸಿದ ಪೊಲೀಸರು, ಮೆಸ್ಕಾಂ, ಪಂಚಾಯತಿ, ಕಂದಾಯ, ಆರೋಗ್ಯ ಇಲಾಖೆ, ಗೃಹರಕ್ಷಕದಳ, ಸ್ವಯಂಸೇವಕರಿಗೆ ಮಠದ ಪರವಾಗಿ ಕಾರ್ಯನಿರ್ವಾಕರ ಅಧಿಕಾರಿ ಪ್ರಕಾಶ ನೇ. ಮಗದುಮ್ಮ ಹಾಗೂ ಆಡಳಿತಾಧಿಕಾರಿ ಸಿ.ಡಿ. ಅಶೋಕ ಕುಮಾರ ಕೃತಜ್ಞತೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಸಮೀಪದ ಹೊಂಬುಜ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಆರು ದಿನಗಳಿಂದ ನಡೆಯುತ್ತಿದ್ದ ವಿಜೃಂಭಣೆಯ ಮಹಾ ರಥೋತ್ಸವಕ್ಕೆ ಶನಿವಾರ ಧ್ವಜಾರೋಹಣ ಹಾಗೂ ಕುಂಕುಮೋತ್ಸವದ ಓಕಳಿಯೊಂದಿಗೆ ತೆರೆ ಬಿದ್ದಿತು.</p>.<p>ಮಠದ ಪೀಠಾಧೀಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ವಿವಿಧ ಆರಾಧನೆಗಳು, ನಾಗವಾಹನೋತ್ಸವ, ಸಿಂಹವಾಹನೋತ್ಸವ, ಬೆಳ್ಳಿ ರಥೋತ್ಸವ, ಪುಷ್ಪರಥೋತ್ಸವ ಹಾಗೂ ಪುರೋಹಿತರಾದ ಪದ್ಮರಾಜ ಇಂದ್ರ ಮತ್ತು ಸಹಪುರೋಹಿತ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನೆರವೇರಿದರು.</p>.<p>ಪಲ್ಲಕ್ಕಿಯಲ್ಲಿ ಅವಭೃತ ಜಿನಬಿಂಬಗಳನ್ನು ನಗರದ ರಾಜಬೀದಿಯಿಂದ ಸಾಲಂಕೃತ ಶೋಭಾಯಾತ್ರೆಯಲ್ಲಿ ಜಿನಸ್ತುತಿಯೊಂದಿಗೆ ತರಲಾಯಿತು.</p>.<p>ಅಗ್ರೋದಕವನ್ನು ಕುಮದ್ವತಿ ತೀರ್ಥದಿಂದ ಸನ್ನಿಧಿಗೆ ಅರ್ಪಿಸಲಾಯಿತು. ಯಕ್ಷಿ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಶಾಸ್ತ್ರೋಕ್ತ ಪೂಜೆ ಸಲ್ಲಿಸಲಾಯಿತು. ಪದ್ಮಾವತಿ ಮಹಿಳಾ ಮಂಡಳ ಹಾಗೂ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಆಗಮಿಸಿದ ಭಕ್ತರು ಕುಂಕುಮೋತ್ಸವದಲ್ಲಿ ಭಾಗಿಯಾಗಿ ಭಕ್ತಿ ಸಮರ್ಪಿಸಿದರು.</p>.<p>ಮಹಾರಥೋತ್ಸವಕ್ಕೆ ಸಹಕರಿಸಿದ ಪೊಲೀಸರು, ಮೆಸ್ಕಾಂ, ಪಂಚಾಯತಿ, ಕಂದಾಯ, ಆರೋಗ್ಯ ಇಲಾಖೆ, ಗೃಹರಕ್ಷಕದಳ, ಸ್ವಯಂಸೇವಕರಿಗೆ ಮಠದ ಪರವಾಗಿ ಕಾರ್ಯನಿರ್ವಾಕರ ಅಧಿಕಾರಿ ಪ್ರಕಾಶ ನೇ. ಮಗದುಮ್ಮ ಹಾಗೂ ಆಡಳಿತಾಧಿಕಾರಿ ಸಿ.ಡಿ. ಅಶೋಕ ಕುಮಾರ ಕೃತಜ್ಞತೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>