ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ‘ಪೌರಕಾರ್ಮಿಕರು ಕೊರೊನಾ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಸೇವೆ ಸಲ್ಲಿಸಿದ್ದಾರೆ. ಕೊರೊನಾ ಪಾಸಿಟಿವ್ ವ್ಯಕ್ತಿಗಳಿರುವ ಕಂಟೈನ್ಮೆಂಟ್ ಪ್ರದೇಶದಲ್ಲೂ ಸ್ವಚ್ಛತಾ ಕಾರ್ಯವನ್ನು ಪ್ರತಿನಿತ್ಯ ನಡೆಸಿದ್ದಾರೆ. ಕೊರೊನಾದಿಂದ ಸಾವಿಗೀಡಾದವರ ಅಂತ್ಯಸಂಸ್ಕಾರ ಕಾರ್ಯವನ್ನು ನಿರಂತರವಾಗಿ ಯಾವುದೇ ಚ್ಯುತಿ ಬಾರದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಪೌರಕಾರ್ಮಿಕರಿಗೆ ಆರೋಗ್ಯ ಸೇವೆ ಸೇರಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಪಾಲಿಕೆ ವತಿಯಿಂದ ಕಲ್ಪಿಸಲು ಬದ್ಧರಾಗಿದ್ದೇವೆ’ ಎಂದರು.