ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, "60 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಸಂತ್ರಸ್ತರ ಸಮಸ್ಯೆ ಬಗೆಹರಿಸದ ಕಾಂಗ್ರೆಸ್ ಪಕ್ಷ ಅವರ ಪಾಲಿಗೆ ಇದ್ದೂ ಸತ್ತಂತಾಗಿದೆ. ಅವರ ಅಧಿಕಾರ ಅವಧಿಯಲ್ಲಿ ಕೇಂದ್ರದ ಅನುಮತಿ ಪಡೆಯದೇ ಸಂತ್ರಸ್ತರಿಗೆ ಮಂಜೂರಾತಿ ಮಾಡಲು ಅರಣ್ಯ ಭೂಮಿ ಡಿನೋಟಿಫಿಕೇಷನ್ ಮಾಡಿದ್ದಾರೆ. ಅದನ್ನು ಪರಿಶೀಲನೆ ನಡೆಸಿ ನಾವು (ಬಿಜೆಪಿ) ಸರಿಪಡಿಸಲು ಮುಂದಾಗಿದ್ದೇವೆ' ಎಂದು ಹೇಳಿದರು.