ಅಡಿಕೆ ವಿಷಯದಲ್ಲಿ ಸುಪ್ರೀಂಕೋರ್ಟ್ ತೂಗುಗತ್ತಿ ಇದೆ. ಅಡಿಕೆಗೆ ರಕ್ಷಾ ಕವಚದ ಅಗತ್ಯವಿದೆ. ಅಡಿಕೆ ಟಾಸ್ಕ್ಫೋರ್ಸ್ ಸುಪ್ರೀಂಕೋರ್ಟ್ನಲ್ಲಿ ಸಮರ್ಥ ವಾದ ಮಂಡಿಸುವ ಮೂಲಕ ಬೆಳೆಗಾರರ ಆತಂಕ ದೂರ ಮಾಡುವ ಪ್ರಯತ್ನ ಮಾಡಲಿದೆ. ಅಡಿಕೆ ಗುಣಮಟ್ಟ ಪರಿಶೀಲನೆಗೆ ಮಾನದಂಡ ನಿಗದಿ ಮಾಡಬೇಕಿದೆ. ಶಾಶ್ವತ ಪರಿಹಾರ ಸಾಧ್ಯವಿಲ್ಲದಿದ್ದರೂ, ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಗಳು ನಡೆಯಬೇಕು. ಗೃಹ ಖಾತೆಯ ಜತೆಗೆ ಅಡಿಕೆ ಸಂರಕ್ಷಣೆಗೂ ಆದ್ಯತೆ ನೀಡುವೆ ಎಂದು ಭರವಸೆ ನೀಡಿದರು.