<p><strong>ಶಿವಮೊಗ್ಗ:</strong> ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿದ್ದ ಶಿವಮೊಗ್ಗ ರಂಗಾಯಣದ ಕಲಾವಿದರಿಗೆ ಶನಿವಾರ ವಾರ್ತಾ ಇಲಾಖೆಯಿಂದ ಸನ್ಮಾನಿಸಲಾಯಿತು.</p>.<p>ರಂಗಾಯಣದಲ್ಲಿ ಶನಿವಾರ ಆಯೋಜಿಸಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಕಲಾವಿದರನ್ನು ಸನ್ಮಾನಿಸಿದವಾರ್ತಾ ಇಲಾಖೆ ಜಂಟಿ ನಿರ್ದೇಶಕ ಡಿ.ಪಿ.ಮುರಳೀಧರ, ‘ಗಣರಾಜ್ಯೋತ್ಸವದಂತಹ ಕಾರ್ಯ<br />ಕ್ರಮದಲ್ಲಿ ನೇರವಾಗಿ ಭಾಗಿಯಾಗಲು ಅವಕಾಶ ದೊರೆಯುವುದು ಅಪರೂಪ. ಶಿವಮೊಗ್ಗ ರಂಗಾಯಣದ ಕಲಾವಿದರು ದೊರೆತ ಅವಕಾಶ ಸದುಪಯೋಗ ಪಡಿಸಿಕೊಂಡು ನಾಡಿಗೆ ಹೆಸರು ತಂದಿದ್ದಾರೆ’ ಎಂದು ಹೇಳಿದರು.</p>.<p>ರಂಗಾಯಣದ ನಿರ್ದೇಶಕ ಸಂದೇಶ ಜವಳಿ, ‘ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸುವುದು ಪ್ರತಿಯೊಬ್ಬರ ಕನಸು. ಈ ಬಾರಿ ನಮ್ಮ ರಂಗಾಯಣದ ಕಲಾವಿದರು ಭಾಗವಹಿಸಿರುವುದು ನಮಗೆಲ್ಲರಿಗೂ ಹೆಮ್ಮೆ ತಂದಿದೆ’ ಎಂದರು.</p>.<p>ಪೆರೇಡ್ನಲ್ಲಿ ಭಾಗವಹಿಸಿದ್ದ ರಂಗಾಯಣದ ಕಲಾವಿದರಾದ ಕಾರ್ತಿಕ್ ಕಲ್ಲುಕುಟಿಕರ್, ನಿತಿನ್, ಮಹಾಬಲೇಶ್ವರ, ರಮ್ಯ ಆರ್., ರಂಜಿತಾ, ಸವಿತಾ ಆರ್. ಕಾಳಿ, ದೀಪ್ತಿ, ಸುಜಿತ್, ಪ್ರಸನ್ನಕುಮಾರ್, ಚಂದನ್, ರವಿಕುಮಾರ್ ಮತ್ತು ಶರತ್ಬಾಬು ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಭಿನಂದನೆ<br />ಸಲ್ಲಿಸಲಾಯಿತು.</p>.<p>ಶಿವಮೊಗ್ಗ ರಂಗಾಯಣ ಕಲಾವಿದರು ಅಭಿನಯಿಸಿರುವ ‘ಹಕ್ಕಿಕಥೆ’ ನಾಟಕದ ವಿಶೇಷ ಪ್ರದರ್ಶನ ನಡೆಯಿತು.</p>.<p>ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಸ್ವಾಗತಿಸಿದರು. ರಂಗ ಸಮಾಜ ಸದಸ್ಯ ಎಸ್.ಆರ್. ಹಾಲಸ್ವಾಮಿ, ರಂಗನಿರ್ದೇಶಕ ಶ್ರೀಪಾದ ಭಟ್, ಪ್ರೆಸ್ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿದ್ದ ಶಿವಮೊಗ್ಗ ರಂಗಾಯಣದ ಕಲಾವಿದರಿಗೆ ಶನಿವಾರ ವಾರ್ತಾ ಇಲಾಖೆಯಿಂದ ಸನ್ಮಾನಿಸಲಾಯಿತು.</p>.<p>ರಂಗಾಯಣದಲ್ಲಿ ಶನಿವಾರ ಆಯೋಜಿಸಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಕಲಾವಿದರನ್ನು ಸನ್ಮಾನಿಸಿದವಾರ್ತಾ ಇಲಾಖೆ ಜಂಟಿ ನಿರ್ದೇಶಕ ಡಿ.ಪಿ.ಮುರಳೀಧರ, ‘ಗಣರಾಜ್ಯೋತ್ಸವದಂತಹ ಕಾರ್ಯ<br />ಕ್ರಮದಲ್ಲಿ ನೇರವಾಗಿ ಭಾಗಿಯಾಗಲು ಅವಕಾಶ ದೊರೆಯುವುದು ಅಪರೂಪ. ಶಿವಮೊಗ್ಗ ರಂಗಾಯಣದ ಕಲಾವಿದರು ದೊರೆತ ಅವಕಾಶ ಸದುಪಯೋಗ ಪಡಿಸಿಕೊಂಡು ನಾಡಿಗೆ ಹೆಸರು ತಂದಿದ್ದಾರೆ’ ಎಂದು ಹೇಳಿದರು.</p>.<p>ರಂಗಾಯಣದ ನಿರ್ದೇಶಕ ಸಂದೇಶ ಜವಳಿ, ‘ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸುವುದು ಪ್ರತಿಯೊಬ್ಬರ ಕನಸು. ಈ ಬಾರಿ ನಮ್ಮ ರಂಗಾಯಣದ ಕಲಾವಿದರು ಭಾಗವಹಿಸಿರುವುದು ನಮಗೆಲ್ಲರಿಗೂ ಹೆಮ್ಮೆ ತಂದಿದೆ’ ಎಂದರು.</p>.<p>ಪೆರೇಡ್ನಲ್ಲಿ ಭಾಗವಹಿಸಿದ್ದ ರಂಗಾಯಣದ ಕಲಾವಿದರಾದ ಕಾರ್ತಿಕ್ ಕಲ್ಲುಕುಟಿಕರ್, ನಿತಿನ್, ಮಹಾಬಲೇಶ್ವರ, ರಮ್ಯ ಆರ್., ರಂಜಿತಾ, ಸವಿತಾ ಆರ್. ಕಾಳಿ, ದೀಪ್ತಿ, ಸುಜಿತ್, ಪ್ರಸನ್ನಕುಮಾರ್, ಚಂದನ್, ರವಿಕುಮಾರ್ ಮತ್ತು ಶರತ್ಬಾಬು ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಭಿನಂದನೆ<br />ಸಲ್ಲಿಸಲಾಯಿತು.</p>.<p>ಶಿವಮೊಗ್ಗ ರಂಗಾಯಣ ಕಲಾವಿದರು ಅಭಿನಯಿಸಿರುವ ‘ಹಕ್ಕಿಕಥೆ’ ನಾಟಕದ ವಿಶೇಷ ಪ್ರದರ್ಶನ ನಡೆಯಿತು.</p>.<p>ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಸ್ವಾಗತಿಸಿದರು. ರಂಗ ಸಮಾಜ ಸದಸ್ಯ ಎಸ್.ಆರ್. ಹಾಲಸ್ವಾಮಿ, ರಂಗನಿರ್ದೇಶಕ ಶ್ರೀಪಾದ ಭಟ್, ಪ್ರೆಸ್ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>