<p><strong>ಕಾರ್ಗಲ್ (ಶಿವಮೊಗ್ಗ):</strong> ಇಲ್ಲಿನ ವಿಶ್ವ ವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ವರ್ಷಾಂತ್ಯದ ವಾರದ ಕೊನೆಯಲ್ಲಿ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.</p>.<p>ಎರಡು ತಿಂಗಳಿನಿಂದ ಕೊರೊನಾ ಮತ್ತು ಹೊಸ ರೂಪಾಂತರ ತಳಿ ಓಮೈಕ್ರಾನ್ ಬಗ್ಗೆ ಇದ್ದ ಆತಂಕದ ಕಾರಣದಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಮುಖ ಕಂಡುಬಂದಿತ್ತು. ಶನಿವಾರ ಮತ್ತು ಭಾನುವಾರ ಜೋಗ ಜಲಪಾತಕ್ಕೆ ದಿಢೀರನೆ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ.</p>.<p>‘ಎರಡು ದಿನಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚಿನ ಪ್ರವಾಸಿಗರು 1,500ಕ್ಕೂ ಹೆಚ್ಚಿನ ಪ್ರವಾಸಿ ವಾಹನಗಳಲ್ಲಿ ಬಂದಿದ್ದಾರೆ. ಜೋಗ ನಿರ್ವಹಣಾ ಪ್ರಾಧಿಕಾರಕ್ಕೆ ₹2 ಲಕ್ಷಕ್ಕೂ ಅಧಿಕ ಆದಾಯ ಸಂಗ್ರಹವಾಗಿದೆ’ ಎಂದು ಪ್ರಾಧಿಕಾರದ ಮೂಲಗಳು ತಿಳಿಸಿವೆ.</p>.<p>ಬಿಸಿಲಿನಲ್ಲಿ ಕಂಗೊಳಿಸುತ್ತಿದ್ದ ಜಲಸಿರಿಯ ವೈಭವಕ್ಕೆ ಬೆರಗಾಗಿ ಪ್ರವಾಸಿಗರು ಜೋಗದ ಗುಂಡಿಯ ಮಾರ್ಗದಲ್ಲಿ ಇಳಿಯಲು ಪ್ರಯತ್ನ ನಡೆಸಿದರು. ಜೋಗದ ಗುಂಡಿಯ ಮಾರ್ಗಕ್ಕೆ ಪ್ರವೇಶ ನಿಷೇಧಿಸಿರುವ ಪ್ರಾಧಿಕಾರ ಸೂಕ್ತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿರುವುದರಿಂದ ಯುವ ಸಮೂಹಕ್ಕೆ ನಿರಾಸೆಯಾಯಿತು.</p>.<p>ಸ್ಥಳೀಯ ವ್ಯಾಪಾರಿಗಳ ಬಳಿಯಿದ್ದ ಸಾಮಗ್ರಿಗಳೆಲ್ಲವೂ ಎರಡು ದಿನಗಳಲ್ಲಿಯೇ ಖಾಲಿಯಾಗಿದ್ದು, ಅವರ ಮುಖಗಳಲ್ಲಿ ಸಂತಸ ಮನೆ ಮಾಡಿತ್ತು. ಶರಾವತಿ ಕಣಿವೆ ಪ್ರದೇಶದಲ್ಲಿರುವ ಎಲ್ಲಾ ವಸತಿ ಗೃಹಗಳು, ಹೋಂ ಸ್ಟೇಗಳು ಭರ್ತಿಯಾಗಿ ಪ್ರವಾಸಿಗರು ವಸತಿ ವ್ಯವಸ್ಥೆಗೆ ಶನಿವಾರ ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಗಲ್ (ಶಿವಮೊಗ್ಗ):</strong> ಇಲ್ಲಿನ ವಿಶ್ವ ವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ವರ್ಷಾಂತ್ಯದ ವಾರದ ಕೊನೆಯಲ್ಲಿ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.</p>.<p>ಎರಡು ತಿಂಗಳಿನಿಂದ ಕೊರೊನಾ ಮತ್ತು ಹೊಸ ರೂಪಾಂತರ ತಳಿ ಓಮೈಕ್ರಾನ್ ಬಗ್ಗೆ ಇದ್ದ ಆತಂಕದ ಕಾರಣದಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಮುಖ ಕಂಡುಬಂದಿತ್ತು. ಶನಿವಾರ ಮತ್ತು ಭಾನುವಾರ ಜೋಗ ಜಲಪಾತಕ್ಕೆ ದಿಢೀರನೆ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ.</p>.<p>‘ಎರಡು ದಿನಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚಿನ ಪ್ರವಾಸಿಗರು 1,500ಕ್ಕೂ ಹೆಚ್ಚಿನ ಪ್ರವಾಸಿ ವಾಹನಗಳಲ್ಲಿ ಬಂದಿದ್ದಾರೆ. ಜೋಗ ನಿರ್ವಹಣಾ ಪ್ರಾಧಿಕಾರಕ್ಕೆ ₹2 ಲಕ್ಷಕ್ಕೂ ಅಧಿಕ ಆದಾಯ ಸಂಗ್ರಹವಾಗಿದೆ’ ಎಂದು ಪ್ರಾಧಿಕಾರದ ಮೂಲಗಳು ತಿಳಿಸಿವೆ.</p>.<p>ಬಿಸಿಲಿನಲ್ಲಿ ಕಂಗೊಳಿಸುತ್ತಿದ್ದ ಜಲಸಿರಿಯ ವೈಭವಕ್ಕೆ ಬೆರಗಾಗಿ ಪ್ರವಾಸಿಗರು ಜೋಗದ ಗುಂಡಿಯ ಮಾರ್ಗದಲ್ಲಿ ಇಳಿಯಲು ಪ್ರಯತ್ನ ನಡೆಸಿದರು. ಜೋಗದ ಗುಂಡಿಯ ಮಾರ್ಗಕ್ಕೆ ಪ್ರವೇಶ ನಿಷೇಧಿಸಿರುವ ಪ್ರಾಧಿಕಾರ ಸೂಕ್ತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿರುವುದರಿಂದ ಯುವ ಸಮೂಹಕ್ಕೆ ನಿರಾಸೆಯಾಯಿತು.</p>.<p>ಸ್ಥಳೀಯ ವ್ಯಾಪಾರಿಗಳ ಬಳಿಯಿದ್ದ ಸಾಮಗ್ರಿಗಳೆಲ್ಲವೂ ಎರಡು ದಿನಗಳಲ್ಲಿಯೇ ಖಾಲಿಯಾಗಿದ್ದು, ಅವರ ಮುಖಗಳಲ್ಲಿ ಸಂತಸ ಮನೆ ಮಾಡಿತ್ತು. ಶರಾವತಿ ಕಣಿವೆ ಪ್ರದೇಶದಲ್ಲಿರುವ ಎಲ್ಲಾ ವಸತಿ ಗೃಹಗಳು, ಹೋಂ ಸ್ಟೇಗಳು ಭರ್ತಿಯಾಗಿ ಪ್ರವಾಸಿಗರು ವಸತಿ ವ್ಯವಸ್ಥೆಗೆ ಶನಿವಾರ ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>