‘ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತಿದ್ದುಪಡಿ ತಂದಾಗಲೇ ಈ ಅಪಾಯದ ಸುಳಿವು ದೊರಕಿತ್ತು. ತಿದ್ದುಪಡಿಯನ್ನು ವಿರೋಧಿಸಿದಾಗ ರಾಜ್ಯದ ಬಿಜೆಪಿ ಮುಖಂಡರು ತಿದ್ದುಪಡಿಯಿಂದ ಎಪಿಎಂಸಿಗೆ ಅಪಾಯವಿಲ್ಲ ಎಂದು ಹೇಳಿದ್ದರು. ಆದರೆ, ಈಗ ಬಿಜೆಪಿ ಸರ್ಕಾರ ನಿಧಾನಕ್ಕೆ ಎಪಿಎಂಸಿ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವ ಸೂಚನೆಗಳು ಸ್ಪಷ್ಟವಾಗಿ ಕಾಣುತ್ತಿವೆ’ ಎಂದು ಅವರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.