<p><strong>ಹೊಸನಗರ:</strong> ತಾಲ್ಲೂಕಿನ ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಮನೆಯೊಂದು ಹೊತ್ತಿ ಉರಿದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. </p>.<p>ಗ್ರಾಮದ ಲಕ್ಷ್ಮಣ್ ಗೌಡ ಅವರ ಮಾಲೀಕತ್ವದ ಮನೆಯಲ್ಲಿ ಶೇಷ ಪವನ್ ಹಾಗೂ ಪ್ರತಿಭಾ ದಂಪತಿ ಬಾಡಿಗೆಗೆ ವಾಸವಾಗಿದ್ದರು. ದಂಪತಿ ಬುಧವಾರ ಹೊರಗೆ ಹೋಗಿದ್ದಾಗ ಶಾರ್ಟ್ ಸರ್ಕಿಟ್ ಉಂಟಾಗಿ ಮನೆಗೆ ಬೆಂಕಿ ತಗುಲಿದೆ.</p>.<p>ಈ ಸಂದರ್ಭದಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಥಳೀಯರೊಬ್ಬರು ಗಮನಿಸಿ ಅಗ್ನಿಶಾಮಕ ದಳ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು.</p>.<p>ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ಹಾಗೂ ಹೊಸ ಮನೆ ನಿರ್ಮಾಣಕ್ಕೆ ತಂದಿಟ್ಟಿದ್ದ ₹ 2 ಲಕ್ಷಕ್ಕೂ ಅಧಿಕ ಮೌಲ್ಯದ ಎಲೆಕ್ಟ್ರಿಕಲ್ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.</p>.<p>ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಆನಂದಪ್ಪ ಎನ್, ಸಿಬ್ಬಂದಿ ಕೆ.ಟಿ. ರಾಜಪ್ಪ, ನರೇಶ್, ಮಂಜುನಾಥ್ ಬಿ, ಆಂಜನೇಯ ಬಿ.ಸಿ, ಭೀಷ್ಮಚಾರಿ, ಪೊಲೀಸ್ ಸಿಬ್ಬಂದಿ ಶಿವಕುಮಾರ್, ಯಶೋದಮ್ಮ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ:</strong> ತಾಲ್ಲೂಕಿನ ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಮನೆಯೊಂದು ಹೊತ್ತಿ ಉರಿದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. </p>.<p>ಗ್ರಾಮದ ಲಕ್ಷ್ಮಣ್ ಗೌಡ ಅವರ ಮಾಲೀಕತ್ವದ ಮನೆಯಲ್ಲಿ ಶೇಷ ಪವನ್ ಹಾಗೂ ಪ್ರತಿಭಾ ದಂಪತಿ ಬಾಡಿಗೆಗೆ ವಾಸವಾಗಿದ್ದರು. ದಂಪತಿ ಬುಧವಾರ ಹೊರಗೆ ಹೋಗಿದ್ದಾಗ ಶಾರ್ಟ್ ಸರ್ಕಿಟ್ ಉಂಟಾಗಿ ಮನೆಗೆ ಬೆಂಕಿ ತಗುಲಿದೆ.</p>.<p>ಈ ಸಂದರ್ಭದಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಥಳೀಯರೊಬ್ಬರು ಗಮನಿಸಿ ಅಗ್ನಿಶಾಮಕ ದಳ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು.</p>.<p>ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ಹಾಗೂ ಹೊಸ ಮನೆ ನಿರ್ಮಾಣಕ್ಕೆ ತಂದಿಟ್ಟಿದ್ದ ₹ 2 ಲಕ್ಷಕ್ಕೂ ಅಧಿಕ ಮೌಲ್ಯದ ಎಲೆಕ್ಟ್ರಿಕಲ್ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.</p>.<p>ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಆನಂದಪ್ಪ ಎನ್, ಸಿಬ್ಬಂದಿ ಕೆ.ಟಿ. ರಾಜಪ್ಪ, ನರೇಶ್, ಮಂಜುನಾಥ್ ಬಿ, ಆಂಜನೇಯ ಬಿ.ಸಿ, ಭೀಷ್ಮಚಾರಿ, ಪೊಲೀಸ್ ಸಿಬ್ಬಂದಿ ಶಿವಕುಮಾರ್, ಯಶೋದಮ್ಮ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>