‘ಕೃಷಿ ಚಟುವಟಿಕೆಗೆ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ನಿರ್ಣಯ ಕೈಗೊಂಡಿದ್ದರು. ಇದಕ್ಕಾಗಿ ಮೂರು ಪುರಾತನ ಕೆರೆಗಳನ್ನು ಗುರುತಿಸಲಾಯಿತು. ಪ್ರಥಮವಾಗಿ ಮಾಕೋಡು ಕೆರೆಯನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆವು. ಸರ್ಕಾರದ ನೆರವಿಗೆ ಕಾಯದೇ, ಗ್ರಾಮಸ್ಥರೇ ಈ ಕಾರ್ಯ ಆರಂಭಿಸಿದರು. ‘ಸಾರಾ’ ಸಂಸ್ಥೆಯವರು ಜೆಸಿಬಿಯನ್ನು ಒದಗಿಸಿದರು. ಊರಿನ ಪ್ರತಿ ಮನೆಯವರು ಧನಸಹಾಯ ಮಾಡಿದರು. ಇದರಿಂದಾಗಿ, ಹೂಳನ್ನು ಪೂರ್ಣವಾಗಿ ತೆಗೆದು ಕೆರೆಗೆ ಮರುಜೀವ ನೀಡಲು ಸಾಧ್ಯವಾಗಿದೆ’ ಎನ್ನುತ್ತಾರೆ ಸ್ವಗ್ರಾಮ ಸಮಿತಿ ಅಧ್ಯಕ್ಷ ಗುರುಮೂರ್ತಿ.