<p>ಹೊಸನಗರ: ‘ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಹೊತ್ತಿರುವ ಹೊಸನಗರ ತಾಲ್ಲೂಕು ತನ್ನ ಹತ್ತಾರು ಸಮಸ್ಯೆಗಳಿಂದ ಹೊರಬಂದು ಸಮಗ್ರ ಅಭಿವೃದ್ಧಿಯತ್ತ ಸಾಗಬೇಕಾದರೆ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರು ಸ್ಥಾಪನೆಯಾಗಬೇಕು’ ಎಂದು ಜನಪ್ರತಿನಿಧಿಗಳು, ಮಠಾಧೀಶರು, ಧರ್ಮಗುರುಗಳು ಭಾನುವಾರ ಹಕ್ಕೊತ್ತಾಯ ಮಂಡಿಸಿದರು.</p>.<p>ತಾಲ್ಲೂಕಿನ ನಗರ ಹೋಬಳಿಯ ಚಿಕ್ಕಪೇಟೆ ಶ್ರೀಮಹಾಗಣಪತಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ ನಂತರ, ಹೊಸನಗರ ವಿಧಾನಸಭಾ ಕ್ಷೇತ್ರದ ಸ್ತಬ್ಧ ಚಿತ್ರಕ್ಕೆ ಚಾಲನೆ ನೀಡುವ ಮೂಲಕ ಪಾದಯಾತ್ರೆ ಆರಂಭಿಸಲಾಯಿತು.</p>.<p>‘ಹೊಸನಗರದಿಂದ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಕಿತ್ತುಕೊಂಡ ಸಂದರ್ಭದಲ್ಲಿ ಅದನ್ನು ವಿರೋಧಿಸಲಾಗಿತ್ತು. ಆದರೆ ಅದು ಫಲಕಾರಿ ಆಗಲಿಲ್ಲ. ಇದೀಗ ಕ್ಷೇತ್ರಕ್ಕಾಗಿ ನಗರ ಹೋಬಳಿಯಿಂದ ನಿರೀಕ್ಷೆಗೂ ಮೀರಿ ಹೋರಾಟದ ಕಿಚ್ಚು ಹತ್ತಿದೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.</p>.<p>‘ಹೊಸನಗರವು ನಾಡಿಗಾಗಿ ತನ್ನ ಸರ್ವಸ್ವವನ್ನೂ ಧಾರೆ ಎರೆದಿದೆ. ಅದಕ್ಕಾಗಿ ಫಲ ದೊರಕಿಲ್ಲ. ಕ್ಷೇತ್ರಕ್ಕಾಗಿ ಒತ್ತಾಯಿಸಿ ನಡೆಯುತ್ತಿರುವ ಈ ಹೋರಾಟಕ್ಕೆ ತನು–ಮನ, ಧನ ಸಹಾಯ ನೀಡುತ್ತೇನೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.</p>.<p>ಮಾಜಿ ಶಾಸಕ ಬಿ. ಸ್ವಾಮಿರಾವ್, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಕಲಗೋಡು ರತ್ನಾಕರ್, ಶಿಮುಲ್ ಅಧ್ಯಕ್ಷ ವಿದ್ಯಾಧರ್ ಬೆಂಬಲ ಘೋಷಿಸಿದರು.</p>.<p>‘ಪಾದಯಾತ್ರೆಗೆ ಸೇರಿರುವ ಜನಸಾಮಾನ್ಯರನ್ನು ನೋಡಿದರೆ ಇಲ್ಲಿಯ ಸಮಸ್ಯೆ ಏನೆಂದು ಅರ್ಥವಾಗುತ್ತದೆ. ಅಲ್ಲದೆ ಹೋರಾಟದಲ್ಲಿ ಧರ್ಮಾತೀತ, ಪಕ್ಷಾತೀತ, ಜಾತ್ಯತೀತವಾಗಿ ಒಗ್ಗಟ್ಟು ಪ್ರದರ್ಶನ ಕಂಡುಬಂದಿದೆ. ಇದು ಭವಿಷ್ಯದ ಹೋರಾಟಕ್ಕೆ ಹುಮ್ಮಸ್ಸು ನೀಡಲಿದೆ’ ಎಂದು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.</p>.<p>ಮಾಜಿ ಶಾಸಕ, 96 ವರ್ಷದ ಹಿರಿಯ ರಾಜಕಾರಣಿ ಬಿ.ಸ್ವಾಮಿರಾವ್ ಪಾದಯಾತ್ರೆಯ ಮೊದಲ ದಿನ 18 ಕಿ.ಮೀ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ‘ಪಾದಯಾತ್ರೆ ನನ್ನ ಸಂಕಲ್ಪ, ಹೆಜ್ಜೆ ಹಾಕಿಯೇ ಸಿದ್ಧ’ ಎಂದು ನಗರದಿಂದ ಹೊಸನಗರದವರೆಗೆ ಹೆಜ್ಜೆ ಹಾಕಿ ಗಮನ ಸೆಳೆದರು.</p>.<p>ಸಂಜೆ ಹೊಸನಗರ ತಲುಪಿ, ಬಸ್ನಿಲ್ದಾಣದ ಆವರಣದಲ್ಲಿ ಪಾದಯಾತ್ರೆ ಸಮಾವೇಶಗೊಂಡಿತು.</p>.<p>ನಿಟ್ಟೂರು ಗರ್ತಿಕೆರೆ ಮಠದ ರೇಣುಕಾನಂದ ಸ್ವಾಮೀಜಿ , ಶಿಮುಲ್ ಅಧ್ಯಕ್ಷ ವಿದ್ಯಾಧರ ಗುರುಶಕ್ತಿ, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಹಾಲಗದ್ದೆ ಉಮೇಶ್, ಎನ್.ಆರ್. ದೇವಾನಂದ್, ಕೆ.ವಿ. ಕೃಷ್ಣಮೂರ್ತಿ, ಆಲುವಳ್ಳಿ ವೀರೇಶ್, ಬಿ.ಜಿ. ಚಂದ್ರಮೌಳಿ ಗೌಡ, ರಮೇಶ ಹಲಸಿನಹಳ್ಳಿ, ಕರುಣಾಕರ ಶೆಟ್ಟಿ, ಸುಮಾ ಸುಬ್ರಹ್ಮಣ್ಯ, ಬಂಡಿ ರಾಮಚಂದ್ರ, ಶ್ವೇತಾ ಬಂಡಿ, ಸತೀಶ್, ಅಂಬ್ರಯ್ಯಮಠ, ಚಕ್ರವಾಕ ಸುಬ್ರಹ್ಮಣ್ಯ, ಸುಧೀಂದ್ರ ಪಂಡಿತ್, ಆರ್.ಎ. ಚಾಬುಸಾಬ್, ವರ್ತೇಶ್, ನಗರ ನಿತಿನ್, ನರ್ತಿಗೆ ಸುರೇಶ್, ಮುಸ್ಲಿಂ, ಕ್ರೈಸ್ತ ಧರ್ಮಗುರುಗಳು, ವಿವಿಧ ಪಕ್ಷಗಳ ಅಧ್ಯಕ್ಷರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪತ್ರಕರ್ತ ರವಿ ಬಿದನೂರು ಕಾರ್ಯಕ್ರಮ ನಿರ್ವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-42-62058086</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ‘ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಹೊತ್ತಿರುವ ಹೊಸನಗರ ತಾಲ್ಲೂಕು ತನ್ನ ಹತ್ತಾರು ಸಮಸ್ಯೆಗಳಿಂದ ಹೊರಬಂದು ಸಮಗ್ರ ಅಭಿವೃದ್ಧಿಯತ್ತ ಸಾಗಬೇಕಾದರೆ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರು ಸ್ಥಾಪನೆಯಾಗಬೇಕು’ ಎಂದು ಜನಪ್ರತಿನಿಧಿಗಳು, ಮಠಾಧೀಶರು, ಧರ್ಮಗುರುಗಳು ಭಾನುವಾರ ಹಕ್ಕೊತ್ತಾಯ ಮಂಡಿಸಿದರು.</p>.<p>ತಾಲ್ಲೂಕಿನ ನಗರ ಹೋಬಳಿಯ ಚಿಕ್ಕಪೇಟೆ ಶ್ರೀಮಹಾಗಣಪತಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ ನಂತರ, ಹೊಸನಗರ ವಿಧಾನಸಭಾ ಕ್ಷೇತ್ರದ ಸ್ತಬ್ಧ ಚಿತ್ರಕ್ಕೆ ಚಾಲನೆ ನೀಡುವ ಮೂಲಕ ಪಾದಯಾತ್ರೆ ಆರಂಭಿಸಲಾಯಿತು.</p>.<p>‘ಹೊಸನಗರದಿಂದ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಕಿತ್ತುಕೊಂಡ ಸಂದರ್ಭದಲ್ಲಿ ಅದನ್ನು ವಿರೋಧಿಸಲಾಗಿತ್ತು. ಆದರೆ ಅದು ಫಲಕಾರಿ ಆಗಲಿಲ್ಲ. ಇದೀಗ ಕ್ಷೇತ್ರಕ್ಕಾಗಿ ನಗರ ಹೋಬಳಿಯಿಂದ ನಿರೀಕ್ಷೆಗೂ ಮೀರಿ ಹೋರಾಟದ ಕಿಚ್ಚು ಹತ್ತಿದೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.</p>.<p>‘ಹೊಸನಗರವು ನಾಡಿಗಾಗಿ ತನ್ನ ಸರ್ವಸ್ವವನ್ನೂ ಧಾರೆ ಎರೆದಿದೆ. ಅದಕ್ಕಾಗಿ ಫಲ ದೊರಕಿಲ್ಲ. ಕ್ಷೇತ್ರಕ್ಕಾಗಿ ಒತ್ತಾಯಿಸಿ ನಡೆಯುತ್ತಿರುವ ಈ ಹೋರಾಟಕ್ಕೆ ತನು–ಮನ, ಧನ ಸಹಾಯ ನೀಡುತ್ತೇನೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.</p>.<p>ಮಾಜಿ ಶಾಸಕ ಬಿ. ಸ್ವಾಮಿರಾವ್, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಕಲಗೋಡು ರತ್ನಾಕರ್, ಶಿಮುಲ್ ಅಧ್ಯಕ್ಷ ವಿದ್ಯಾಧರ್ ಬೆಂಬಲ ಘೋಷಿಸಿದರು.</p>.<p>‘ಪಾದಯಾತ್ರೆಗೆ ಸೇರಿರುವ ಜನಸಾಮಾನ್ಯರನ್ನು ನೋಡಿದರೆ ಇಲ್ಲಿಯ ಸಮಸ್ಯೆ ಏನೆಂದು ಅರ್ಥವಾಗುತ್ತದೆ. ಅಲ್ಲದೆ ಹೋರಾಟದಲ್ಲಿ ಧರ್ಮಾತೀತ, ಪಕ್ಷಾತೀತ, ಜಾತ್ಯತೀತವಾಗಿ ಒಗ್ಗಟ್ಟು ಪ್ರದರ್ಶನ ಕಂಡುಬಂದಿದೆ. ಇದು ಭವಿಷ್ಯದ ಹೋರಾಟಕ್ಕೆ ಹುಮ್ಮಸ್ಸು ನೀಡಲಿದೆ’ ಎಂದು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.</p>.<p>ಮಾಜಿ ಶಾಸಕ, 96 ವರ್ಷದ ಹಿರಿಯ ರಾಜಕಾರಣಿ ಬಿ.ಸ್ವಾಮಿರಾವ್ ಪಾದಯಾತ್ರೆಯ ಮೊದಲ ದಿನ 18 ಕಿ.ಮೀ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ‘ಪಾದಯಾತ್ರೆ ನನ್ನ ಸಂಕಲ್ಪ, ಹೆಜ್ಜೆ ಹಾಕಿಯೇ ಸಿದ್ಧ’ ಎಂದು ನಗರದಿಂದ ಹೊಸನಗರದವರೆಗೆ ಹೆಜ್ಜೆ ಹಾಕಿ ಗಮನ ಸೆಳೆದರು.</p>.<p>ಸಂಜೆ ಹೊಸನಗರ ತಲುಪಿ, ಬಸ್ನಿಲ್ದಾಣದ ಆವರಣದಲ್ಲಿ ಪಾದಯಾತ್ರೆ ಸಮಾವೇಶಗೊಂಡಿತು.</p>.<p>ನಿಟ್ಟೂರು ಗರ್ತಿಕೆರೆ ಮಠದ ರೇಣುಕಾನಂದ ಸ್ವಾಮೀಜಿ , ಶಿಮುಲ್ ಅಧ್ಯಕ್ಷ ವಿದ್ಯಾಧರ ಗುರುಶಕ್ತಿ, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಹಾಲಗದ್ದೆ ಉಮೇಶ್, ಎನ್.ಆರ್. ದೇವಾನಂದ್, ಕೆ.ವಿ. ಕೃಷ್ಣಮೂರ್ತಿ, ಆಲುವಳ್ಳಿ ವೀರೇಶ್, ಬಿ.ಜಿ. ಚಂದ್ರಮೌಳಿ ಗೌಡ, ರಮೇಶ ಹಲಸಿನಹಳ್ಳಿ, ಕರುಣಾಕರ ಶೆಟ್ಟಿ, ಸುಮಾ ಸುಬ್ರಹ್ಮಣ್ಯ, ಬಂಡಿ ರಾಮಚಂದ್ರ, ಶ್ವೇತಾ ಬಂಡಿ, ಸತೀಶ್, ಅಂಬ್ರಯ್ಯಮಠ, ಚಕ್ರವಾಕ ಸುಬ್ರಹ್ಮಣ್ಯ, ಸುಧೀಂದ್ರ ಪಂಡಿತ್, ಆರ್.ಎ. ಚಾಬುಸಾಬ್, ವರ್ತೇಶ್, ನಗರ ನಿತಿನ್, ನರ್ತಿಗೆ ಸುರೇಶ್, ಮುಸ್ಲಿಂ, ಕ್ರೈಸ್ತ ಧರ್ಮಗುರುಗಳು, ವಿವಿಧ ಪಕ್ಷಗಳ ಅಧ್ಯಕ್ಷರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪತ್ರಕರ್ತ ರವಿ ಬಿದನೂರು ಕಾರ್ಯಕ್ರಮ ನಿರ್ವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-42-62058086</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>