<p>ಹೊಸನಗರ: ‘ಪುಸ್ತಕ ಮಸ್ತಕಕ್ಕಿಳಿದಾಗ ಮನಸ್ಸು ಪರಿವರ್ತನೆಯಾಗುತ್ತದೆ’ ಎಂದು ಹಿರಿಯ ಚಿಂತಕ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ತ್ರಿಣಿವೆ ಗ್ರಾಮದ ನಾಗಪ್ಪ ಅವರ ಮನೆಯಲ್ಲಿ ನಡೆದ ‘ಮನೆಯಂಗಳದಲ್ಲಿ ಗ್ರಂಥಾಲಯ’ ಕಾರ್ಯಕ್ರಮ ಉದ್ಘಾಟಿಸಿ ಈಚೆಗೆ ಮಾತನಾಡಿದರು.</p>.<p>‘ಕಾದಂಬರಿಗಳು ಚಲನಚಿತ್ರವಾದಾಗ ಅವು ತನ್ನ ಮಹತ್ವ ಕಳೆದುಕೊಳ್ಳುತ್ತವೆ. ಪ್ರತಿಯೊಂದು ಕಾದಂಬರಿಯ ಸೊಗಸು, ವರ್ಣನೆ ಅದರ ಪ್ರತಿ ಪುಟದಲ್ಲೂ ಅಡಕವಾಗಿರುತ್ತದೆ. ಅದನ್ನು ಚಲನಚಿತ್ರದಲ್ಲಿ ಕಾಣಲು ಸಾಧ್ಯವಿಲ್ಲ. ಕುವೆಂಪುರವರ ಮಲೆಗಳಲ್ಲಿ ಮದುಮಗಳು ಕಾದಂಬರಿ ಓದಿದಾಗ ಸಿಗುವ ಅನುಭೂತಿ, ಸಿನಿಮಾದಿಂದ ಸಿಗುವುದಿಲ್ಲ’ ಎಂದರು.</p>.<p>‘ಮನೆಮನೆಯಲ್ಲೂ ಗ್ರಂಥಾಲಯ ಆಗಬೇಕೆಂಬ ಪ್ರಯತ್ನ ಶ್ಲಾಘನೀಯ’ ಎಂದು ಮಹಾಬಲ ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಗಣೇಶ ಮೂರ್ತಿ ಮಾತನಾಡಿದರು. ಸಾಮಾಜಿಕ ಕಾರ್ಯಕರ್ತ ಹನಿಯ ರವಿ ನೂತನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನೀಡಿದರು.</p>.<p>ವಕೀಲ ರಾಮಪ್ಪ, ಜಿ.ಎನ್. ಬಸಪ್ಪ ಗೌಡ, ಡಿ.ಎಸ್. ರಾಘವೇಂದ್ರ, ವಿಶ್ವೇಶ್ವರ ಗೌಡ, ರಮಾ, ನವೀನ್ ಕುಮಾರ್, ಕೆ.ಜಿ.ನಾಗೇಶ್, ಕೃಷ್ಣಮೂರ್ತಿ ತೊಗರೆ, ಇದ್ದರು. ಅಶ್ವಿನಿ ಪಂಡಿತ್ ನಿರೂಪಿಸಿದರು. ಶಿವಾನಂದಪ್ಪ ಸ್ವಾಗತಿಸಿದರು. ಶುಭ ದಿನೇಶ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-42-2119625362</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ‘ಪುಸ್ತಕ ಮಸ್ತಕಕ್ಕಿಳಿದಾಗ ಮನಸ್ಸು ಪರಿವರ್ತನೆಯಾಗುತ್ತದೆ’ ಎಂದು ಹಿರಿಯ ಚಿಂತಕ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ತ್ರಿಣಿವೆ ಗ್ರಾಮದ ನಾಗಪ್ಪ ಅವರ ಮನೆಯಲ್ಲಿ ನಡೆದ ‘ಮನೆಯಂಗಳದಲ್ಲಿ ಗ್ರಂಥಾಲಯ’ ಕಾರ್ಯಕ್ರಮ ಉದ್ಘಾಟಿಸಿ ಈಚೆಗೆ ಮಾತನಾಡಿದರು.</p>.<p>‘ಕಾದಂಬರಿಗಳು ಚಲನಚಿತ್ರವಾದಾಗ ಅವು ತನ್ನ ಮಹತ್ವ ಕಳೆದುಕೊಳ್ಳುತ್ತವೆ. ಪ್ರತಿಯೊಂದು ಕಾದಂಬರಿಯ ಸೊಗಸು, ವರ್ಣನೆ ಅದರ ಪ್ರತಿ ಪುಟದಲ್ಲೂ ಅಡಕವಾಗಿರುತ್ತದೆ. ಅದನ್ನು ಚಲನಚಿತ್ರದಲ್ಲಿ ಕಾಣಲು ಸಾಧ್ಯವಿಲ್ಲ. ಕುವೆಂಪುರವರ ಮಲೆಗಳಲ್ಲಿ ಮದುಮಗಳು ಕಾದಂಬರಿ ಓದಿದಾಗ ಸಿಗುವ ಅನುಭೂತಿ, ಸಿನಿಮಾದಿಂದ ಸಿಗುವುದಿಲ್ಲ’ ಎಂದರು.</p>.<p>‘ಮನೆಮನೆಯಲ್ಲೂ ಗ್ರಂಥಾಲಯ ಆಗಬೇಕೆಂಬ ಪ್ರಯತ್ನ ಶ್ಲಾಘನೀಯ’ ಎಂದು ಮಹಾಬಲ ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಗಣೇಶ ಮೂರ್ತಿ ಮಾತನಾಡಿದರು. ಸಾಮಾಜಿಕ ಕಾರ್ಯಕರ್ತ ಹನಿಯ ರವಿ ನೂತನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನೀಡಿದರು.</p>.<p>ವಕೀಲ ರಾಮಪ್ಪ, ಜಿ.ಎನ್. ಬಸಪ್ಪ ಗೌಡ, ಡಿ.ಎಸ್. ರಾಘವೇಂದ್ರ, ವಿಶ್ವೇಶ್ವರ ಗೌಡ, ರಮಾ, ನವೀನ್ ಕುಮಾರ್, ಕೆ.ಜಿ.ನಾಗೇಶ್, ಕೃಷ್ಣಮೂರ್ತಿ ತೊಗರೆ, ಇದ್ದರು. ಅಶ್ವಿನಿ ಪಂಡಿತ್ ನಿರೂಪಿಸಿದರು. ಶಿವಾನಂದಪ್ಪ ಸ್ವಾಗತಿಸಿದರು. ಶುಭ ದಿನೇಶ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-42-2119625362</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>