<p><strong>ಹೊಸನಗರ:</strong> ‘ತಮಗೆ ಮಂಜೂರಾದ ಜಮೀನಿನ ಪಕ್ಕ ಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದ ರೈತರೊಬ್ಬರು ಮಂಗಳವಾರ ಏಕಾಂಗಿಯಾಗಿ ತಾಲ್ಲೂಕು ಕಚೇರಿಯಲ್ಲಿ ಧರಣಿ ನಡೆಸಿದರು.</p>.<p>ಮೇಲಿನ ಬೆಸಿಗೆ ಗ್ರಾಮ ಪಂಚಾಯಿತಿಯ ಎಲ್.ಗುಡ್ಡೆಕೊಪ್ಪ ನಿವಾಸಿ ರೈತ ರಾಮನಾಯ್ಕ ಅವರು, ‘ನಮ್ಮ ಕುಟುಂಬಕ್ಕೆ 50 ವರ್ಷಗಳ ಹಿಂದೆ 4 ಎಕರೆ ಸಾಗುವಳಿ ಜಮೀನು ಮಂಜೂರು ಆಗಿದೆ. ಪಕ್ಕ ಪೋಡಿ ಆಗಬೇಕಾಗಿದೆ. ಅರಣ್ಯ ಇಲಾಖೆಯ ಅಭಿಪ್ರಾಯದ ಸಮಸ್ಯೆಯಿಂದ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಯಾವ ಇಲಾಖೆಯಲ್ಲಿ ಕೇಳಿದರೂ ಸೂಕ್ತ ಉತ್ತರ ನೀಡುತ್ತಿಲ್ಲ. ಹಲವು ವರ್ಷಗಳಿಂದ ಇಲಾಖೆಗೆ ಅಲೆದು, ಅಲೆದು ಸಾಕಾಗಿದೆ. ತಾಲ್ಲೂಕು ಕಚೇರಿಯಲ್ಲಿ ಬಡ ರೈತರ ಸಮಸ್ಯೆ ಕೇಳುವವರಿಲ್ಲ’ ಎಂದು ದೂರಿದರು.</p>.<p>ಇಲಾಖೆ ಆವರಣದಲ್ಲಿ ರೈತ ಧರಣಿ ಕುಳಿತ ವಿಚಾರ ಶಾಸಕ ಆರಗ ಜ್ಞಾನೇಂದ್ರ ಅವರ ಗಮನಕ್ಕೆ ಬರುತ್ತಿದ್ದಂತೆ ತಹಶೀಲ್ದಾರ್ ಭರತ್ರಾಜ್ ಧರಣಿ ನಿರತ ರೈತ ರಾಮನಾಯ್ಕ ಅವರ ಮನವೊಲಿಸಿದ್ದಾರೆ.</p>.<p>ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರೇಮನೆ, ಜಿ.ಪಂ. ಮಾಜಿ ಸದಸ್ಯ ಉಮೇಶ್ ಹೊಸನಗರ, ತ.ಮಾ. ನರಸಿಂಹ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-42-299723877</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ:</strong> ‘ತಮಗೆ ಮಂಜೂರಾದ ಜಮೀನಿನ ಪಕ್ಕ ಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದ ರೈತರೊಬ್ಬರು ಮಂಗಳವಾರ ಏಕಾಂಗಿಯಾಗಿ ತಾಲ್ಲೂಕು ಕಚೇರಿಯಲ್ಲಿ ಧರಣಿ ನಡೆಸಿದರು.</p>.<p>ಮೇಲಿನ ಬೆಸಿಗೆ ಗ್ರಾಮ ಪಂಚಾಯಿತಿಯ ಎಲ್.ಗುಡ್ಡೆಕೊಪ್ಪ ನಿವಾಸಿ ರೈತ ರಾಮನಾಯ್ಕ ಅವರು, ‘ನಮ್ಮ ಕುಟುಂಬಕ್ಕೆ 50 ವರ್ಷಗಳ ಹಿಂದೆ 4 ಎಕರೆ ಸಾಗುವಳಿ ಜಮೀನು ಮಂಜೂರು ಆಗಿದೆ. ಪಕ್ಕ ಪೋಡಿ ಆಗಬೇಕಾಗಿದೆ. ಅರಣ್ಯ ಇಲಾಖೆಯ ಅಭಿಪ್ರಾಯದ ಸಮಸ್ಯೆಯಿಂದ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಯಾವ ಇಲಾಖೆಯಲ್ಲಿ ಕೇಳಿದರೂ ಸೂಕ್ತ ಉತ್ತರ ನೀಡುತ್ತಿಲ್ಲ. ಹಲವು ವರ್ಷಗಳಿಂದ ಇಲಾಖೆಗೆ ಅಲೆದು, ಅಲೆದು ಸಾಕಾಗಿದೆ. ತಾಲ್ಲೂಕು ಕಚೇರಿಯಲ್ಲಿ ಬಡ ರೈತರ ಸಮಸ್ಯೆ ಕೇಳುವವರಿಲ್ಲ’ ಎಂದು ದೂರಿದರು.</p>.<p>ಇಲಾಖೆ ಆವರಣದಲ್ಲಿ ರೈತ ಧರಣಿ ಕುಳಿತ ವಿಚಾರ ಶಾಸಕ ಆರಗ ಜ್ಞಾನೇಂದ್ರ ಅವರ ಗಮನಕ್ಕೆ ಬರುತ್ತಿದ್ದಂತೆ ತಹಶೀಲ್ದಾರ್ ಭರತ್ರಾಜ್ ಧರಣಿ ನಿರತ ರೈತ ರಾಮನಾಯ್ಕ ಅವರ ಮನವೊಲಿಸಿದ್ದಾರೆ.</p>.<p>ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರೇಮನೆ, ಜಿ.ಪಂ. ಮಾಜಿ ಸದಸ್ಯ ಉಮೇಶ್ ಹೊಸನಗರ, ತ.ಮಾ. ನರಸಿಂಹ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-42-299723877</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>