<p><strong>ಹೊಸನಗರ</strong>: ನಾಶವಾಗಿರುವ ಪರಿಸರವನ್ನು ಮರುಸೃಷ್ಟಿ ಮಾಡಲು ಇನ್ನೂ ನೂರಾರು ತಲೆಮಾರುಗಳೇ ಬೇಕಾಗುತ್ತವೆ ಎಂದು ಪರಿಸರ ತಜ್ಞ ಚಕ್ರವಾಕ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಬಟ್ಟೆಮಲ್ಲಪ್ಪದ ವ್ಯಾಸ ಮಹರ್ಷಿ ಗುರುಕುಲದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಭೂ ಸುಪೋಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಅಂದಾಜಿಗೆ ಸಿಗದಷ್ಟು ತೀವ್ರಗತಿಯಲ್ಲಿ ಪರಿಸರ ನಾಶವಾಗುತ್ತಿದೆ. ಮುಂದಿನ ತಲೆಮಾರಿಗೆ ಪರಿಸರವನ್ನು ಚಿತ್ರದ ಮೂಲಕ ತೋರಿಸುವ ಪರಿಸ್ಥಿತಿ ಬರಲಿದೆ. ಇದು ಹಲವು ಆಯಾಮಗಳ ಸಮಸ್ಯೆಗಳನ್ನು ತಂದೊಡ್ಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು. </p>.<p>ಮಕ್ಕಳು ಈಗಿನಿಂದಲೇ ತಮ್ಮ ಮನೆ ಪರಿಸರವನ್ನಾದರೂ ಉಳಿಸಿಕೊಳ್ಳುವ ಕೆಲಸ ಆರಂಭಿಸಬೇಕು ಎಂದು ನಿವೃತ್ತ ಸೈನಿಕ ಕೆ. ಪಿ. ಕೃಷ್ಣಮೂರ್ತಿ ಹೇಳಿದರು. </p>.<p>ಪ್ರಗತಿಪರ ಕೃಿಷಿಕ ನಾಗರಾಜ್ ಮಾತನಾಡಿದರು. ವ್ಯಾಸ ಮಹರ್ಷಿ ಗುರುಕುಲ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಎಸ್. ಬ್ಯಾಣದ ಸ್ವಾಗತಿಸಿದರು. ಕಾರ್ಯದರ್ಶಿ ರಶ್ಮಿ ಬಿ. ಎಚ್. ವಂದಿಸಿದರು. ಹಿರಿಯ ಶಿಕ್ಷಕಿ ಶಿವಲೀಲಾ, ಪವಿತ್ರಾ ಹಾಗೂ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ</strong>: ನಾಶವಾಗಿರುವ ಪರಿಸರವನ್ನು ಮರುಸೃಷ್ಟಿ ಮಾಡಲು ಇನ್ನೂ ನೂರಾರು ತಲೆಮಾರುಗಳೇ ಬೇಕಾಗುತ್ತವೆ ಎಂದು ಪರಿಸರ ತಜ್ಞ ಚಕ್ರವಾಕ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಬಟ್ಟೆಮಲ್ಲಪ್ಪದ ವ್ಯಾಸ ಮಹರ್ಷಿ ಗುರುಕುಲದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಭೂ ಸುಪೋಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಅಂದಾಜಿಗೆ ಸಿಗದಷ್ಟು ತೀವ್ರಗತಿಯಲ್ಲಿ ಪರಿಸರ ನಾಶವಾಗುತ್ತಿದೆ. ಮುಂದಿನ ತಲೆಮಾರಿಗೆ ಪರಿಸರವನ್ನು ಚಿತ್ರದ ಮೂಲಕ ತೋರಿಸುವ ಪರಿಸ್ಥಿತಿ ಬರಲಿದೆ. ಇದು ಹಲವು ಆಯಾಮಗಳ ಸಮಸ್ಯೆಗಳನ್ನು ತಂದೊಡ್ಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು. </p>.<p>ಮಕ್ಕಳು ಈಗಿನಿಂದಲೇ ತಮ್ಮ ಮನೆ ಪರಿಸರವನ್ನಾದರೂ ಉಳಿಸಿಕೊಳ್ಳುವ ಕೆಲಸ ಆರಂಭಿಸಬೇಕು ಎಂದು ನಿವೃತ್ತ ಸೈನಿಕ ಕೆ. ಪಿ. ಕೃಷ್ಣಮೂರ್ತಿ ಹೇಳಿದರು. </p>.<p>ಪ್ರಗತಿಪರ ಕೃಿಷಿಕ ನಾಗರಾಜ್ ಮಾತನಾಡಿದರು. ವ್ಯಾಸ ಮಹರ್ಷಿ ಗುರುಕುಲ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಎಸ್. ಬ್ಯಾಣದ ಸ್ವಾಗತಿಸಿದರು. ಕಾರ್ಯದರ್ಶಿ ರಶ್ಮಿ ಬಿ. ಎಚ್. ವಂದಿಸಿದರು. ಹಿರಿಯ ಶಿಕ್ಷಕಿ ಶಿವಲೀಲಾ, ಪವಿತ್ರಾ ಹಾಗೂ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>