<p>ಹೊಸನಗರ: ತಾಲ್ಲೂಕಿನ ಜಯನಗರ ಪ್ರೌಢಶಾಲೆಯಲ್ಲಿ 2004–05ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಿತು.</p>.<p>ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಸ್ಮರಿಸಿ, ನೆನಪಿನ ಕಾಣಿಕೆ ನೀಡಿ ವಿದ್ಯಾರ್ಥಿಗಳು ಸಂಭ್ರಮಿಸಿದರು.</p>.<p>ಮುಖ್ಯ ಶಿಕ್ಷಕರಾದ ಶ್ರೀಪತಿ, ಕೆ.ಪಿ. ಶ್ರೀಧರ್, ಗಂಗಪ್ಪ, ಗಣಪತಿ ಆರ್., ರಮೇಶ್ ಅಶ್ವಿನ್, ಮಹಾಲಕ್ಷ್ಮಿ, ಪವಿತ್ರ, ಸುಮಲತಾ, ಸುರೇಂದ್ರ, ಪುಟ್ಟಪ್ಪ ಅವರ ಸೇವೆಗೆ ಗೌರವ ಸಲ್ಲಿಸಲಾಯಿತು.</p>.<p>ಗುರುವಂದನೆ ಸ್ವೀಕರಿಸಿ ಮಾತನಾಡಿದ ಶಿಕ್ಷಕರು, ‘ಶ್ರದ್ಧೆ, ಆತ್ಮಸ್ಥೈರ್ಯದಿಂದ ವಿದ್ಯಾಭ್ಯಾಸ ಮಾಡಿದರೆ ನೆಮ್ಮದಿಯ ಜೀವನ ಕೊಂಡುಕೊಳ್ಳಬಹುದು ಎಂದರು.</p>.<p>ಕಲಿಕೆಗೆ ವಯೋಮಿತಿ ಇಲ್ಲ. ಯಾವುದೇ ಕೆಲಸ ಮೇಲು ಕೀಳಲ್ಲ. ಕಾಯಕವನ್ನು ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಎಂ. ಸೌಮ್ಯ ಸ್ವಾಗತಿಸಿದರು. ಅಶ್ವಿನಿ ಪಂಡಿತ್ ಹಾಗೂ ಶಿಲ್ಪ. ಕೆ ಕಾರ್ಯಕ್ರಮ ನಿರೂಪಿಸಿದರು. ಮಂಜುಳಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-42-1052360231</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ತಾಲ್ಲೂಕಿನ ಜಯನಗರ ಪ್ರೌಢಶಾಲೆಯಲ್ಲಿ 2004–05ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಿತು.</p>.<p>ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಸ್ಮರಿಸಿ, ನೆನಪಿನ ಕಾಣಿಕೆ ನೀಡಿ ವಿದ್ಯಾರ್ಥಿಗಳು ಸಂಭ್ರಮಿಸಿದರು.</p>.<p>ಮುಖ್ಯ ಶಿಕ್ಷಕರಾದ ಶ್ರೀಪತಿ, ಕೆ.ಪಿ. ಶ್ರೀಧರ್, ಗಂಗಪ್ಪ, ಗಣಪತಿ ಆರ್., ರಮೇಶ್ ಅಶ್ವಿನ್, ಮಹಾಲಕ್ಷ್ಮಿ, ಪವಿತ್ರ, ಸುಮಲತಾ, ಸುರೇಂದ್ರ, ಪುಟ್ಟಪ್ಪ ಅವರ ಸೇವೆಗೆ ಗೌರವ ಸಲ್ಲಿಸಲಾಯಿತು.</p>.<p>ಗುರುವಂದನೆ ಸ್ವೀಕರಿಸಿ ಮಾತನಾಡಿದ ಶಿಕ್ಷಕರು, ‘ಶ್ರದ್ಧೆ, ಆತ್ಮಸ್ಥೈರ್ಯದಿಂದ ವಿದ್ಯಾಭ್ಯಾಸ ಮಾಡಿದರೆ ನೆಮ್ಮದಿಯ ಜೀವನ ಕೊಂಡುಕೊಳ್ಳಬಹುದು ಎಂದರು.</p>.<p>ಕಲಿಕೆಗೆ ವಯೋಮಿತಿ ಇಲ್ಲ. ಯಾವುದೇ ಕೆಲಸ ಮೇಲು ಕೀಳಲ್ಲ. ಕಾಯಕವನ್ನು ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಎಂ. ಸೌಮ್ಯ ಸ್ವಾಗತಿಸಿದರು. ಅಶ್ವಿನಿ ಪಂಡಿತ್ ಹಾಗೂ ಶಿಲ್ಪ. ಕೆ ಕಾರ್ಯಕ್ರಮ ನಿರೂಪಿಸಿದರು. ಮಂಜುಳಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-42-1052360231</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>