<p><strong>ಹೊಸನಗರ</strong>: ಸಮೀಪದ ಬೈಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿಯ ಕಾರ್ಯವೈಖರಿ ವಿರುದ್ಧ ದೂರು ನೀಡಿ ಬದಲಾವಣೆಗೆ ಪಟ್ಟು ಹಿಡಿದ ಕಾರಣ ಶಿಕ್ಷಣಾಧಿಕಾರಿಯು ಶುಕ್ರವಾರ ಶಾಲೆಗೆ ಭೇಟಿ ನೀಡಿ ಪೋಷಕರ ಅಹವಾಲು ಆಲಿಸಿದರು.</p>.<p>ಬೈಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಶಿಕ್ಷಕಿ ಉಷಾರಾಣಿ ಸಮಯ ಪಾಲನೆ ಮಾಡುತ್ತಿಲ್ಲ. ಅಲ್ಲದೇ ಮಕ್ಕಳಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಪೋಷಕರು ಶಿಕ್ಷಣಾಧಿಕಾರಿಗೆ ಈ ದೂರು ನೀಡಿ ಶಿಕ್ಷಕಿಯನ್ನು ಬದಲಾಯಿಸುವಂತೆ ಪಟ್ಟು ಹಿಡಿದಿದ್ದರು.</p>.<p class="Subhead">ಶಿಕ್ಷಣಾಧಿಕಾರಿ ಸಭೆ: ಪೋಷಕರ ದೂರಿನನ್ವಯ ಪೋಷಕರ ಜೊತೆ ಸಭೆ ನಡೆಸಿದ ಶಿಕ್ಷಣಾಧಿಕಾರಿ ಎಚ್.ಆರ್.ಕೃಷ್ಣಮೂರ್ತಿ ಪೋಷಕರ ಅಹವಾಲು ಆಲಿಸಿದರು. ಈ ವೇಳೆ ಬಹುತೇಕ ಪೋಷಕರು ಮುಖ್ಯಶಿಕ್ಷಕಿ ವರ್ತನೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಸ್ಪಂದಿಸಿದ ಶಿಕ್ಷಣಾಧಿಕಾರಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳುವಂತೆ ಶಾಲಾಭಿವೃದ್ಧಿ ಸಮಿತಿಗೆ ಸೂಚಿಸಿದರು. ಅತಿಥಿ ಶಿಕ್ಷಕರ ನೇಮಕವಾದ ನಂತರ ಶಿಕ್ಷಕರನ್ನು ಬದಲಾಯಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ.</p>.<p>ಸಭೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಕುಮಾರ್, ಅರುಣ, ಪ್ರಮುಖರಾದ ಬಿ.ವೈ.ಮಹೇಶ್, ಸುರೇಶ್, ಗಣೇಶ್, ಪ್ರವೀಣ ನಾಯ್ಕ್, ಎಸ್.ಪ್ರವೀಣ್, ರಾಕೇಶ್, ಮಂಜುನಾಥ್, ಚೇತನ, ಸುರೇಂದ್ರ, ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ</strong>: ಸಮೀಪದ ಬೈಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿಯ ಕಾರ್ಯವೈಖರಿ ವಿರುದ್ಧ ದೂರು ನೀಡಿ ಬದಲಾವಣೆಗೆ ಪಟ್ಟು ಹಿಡಿದ ಕಾರಣ ಶಿಕ್ಷಣಾಧಿಕಾರಿಯು ಶುಕ್ರವಾರ ಶಾಲೆಗೆ ಭೇಟಿ ನೀಡಿ ಪೋಷಕರ ಅಹವಾಲು ಆಲಿಸಿದರು.</p>.<p>ಬೈಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಶಿಕ್ಷಕಿ ಉಷಾರಾಣಿ ಸಮಯ ಪಾಲನೆ ಮಾಡುತ್ತಿಲ್ಲ. ಅಲ್ಲದೇ ಮಕ್ಕಳಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಪೋಷಕರು ಶಿಕ್ಷಣಾಧಿಕಾರಿಗೆ ಈ ದೂರು ನೀಡಿ ಶಿಕ್ಷಕಿಯನ್ನು ಬದಲಾಯಿಸುವಂತೆ ಪಟ್ಟು ಹಿಡಿದಿದ್ದರು.</p>.<p class="Subhead">ಶಿಕ್ಷಣಾಧಿಕಾರಿ ಸಭೆ: ಪೋಷಕರ ದೂರಿನನ್ವಯ ಪೋಷಕರ ಜೊತೆ ಸಭೆ ನಡೆಸಿದ ಶಿಕ್ಷಣಾಧಿಕಾರಿ ಎಚ್.ಆರ್.ಕೃಷ್ಣಮೂರ್ತಿ ಪೋಷಕರ ಅಹವಾಲು ಆಲಿಸಿದರು. ಈ ವೇಳೆ ಬಹುತೇಕ ಪೋಷಕರು ಮುಖ್ಯಶಿಕ್ಷಕಿ ವರ್ತನೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಸ್ಪಂದಿಸಿದ ಶಿಕ್ಷಣಾಧಿಕಾರಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳುವಂತೆ ಶಾಲಾಭಿವೃದ್ಧಿ ಸಮಿತಿಗೆ ಸೂಚಿಸಿದರು. ಅತಿಥಿ ಶಿಕ್ಷಕರ ನೇಮಕವಾದ ನಂತರ ಶಿಕ್ಷಕರನ್ನು ಬದಲಾಯಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ.</p>.<p>ಸಭೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಕುಮಾರ್, ಅರುಣ, ಪ್ರಮುಖರಾದ ಬಿ.ವೈ.ಮಹೇಶ್, ಸುರೇಶ್, ಗಣೇಶ್, ಪ್ರವೀಣ ನಾಯ್ಕ್, ಎಸ್.ಪ್ರವೀಣ್, ರಾಕೇಶ್, ಮಂಜುನಾಥ್, ಚೇತನ, ಸುರೇಂದ್ರ, ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>