<p>ಹೊಸನಗರ: ‘ಮಲೆನಾಡು–ಕರಾವಳಿಯನ್ನು ಸಂಪರ್ಕಿಸುವ ಶಿವಮೊಗ್ಗ–ಶೃಂಗೇರಿ–ಮಂಗಳೂರು ರೈಲು ಮಾರ್ಗ ಹೊಸನಗರ ತಾಲ್ಲೂಕು ಕೇಂದ್ರದ ಮೂಲಕ ಸಾಗಲಿ’ ಎಂದು ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್ ಮಲೇಬೈಲು ಆಗ್ರಹಿಸಿದರು.</p>.<p>‘ಈ ರೈಲು ಮಾರ್ಗದ ಡಿ.ಪಿ.ಆರ್ (ವಿಸ್ತೃತ ಯೋಜನಾ ವರದಿ) ತಯಾರಿಗೆ ಟೆಂಡರ್ ಕರೆಯಲಾಗಿದೆ. ಇದು ಅಂದಾಜು 332 ಕಿ.ಮೀ ಉದ್ದದ ಮಾರ್ಗವಾಗಿದ್ದು, ₹ 3,300 ಕೋಟಿ ಅಂದಾಜು ವೆಚ್ಚದ ಯೋಜನೆಯಾಗಿದೆ. ಇದರ ವ್ಯಾಪ್ತಿಗೆ ಹೊಸನಗರ ತಾಲ್ಲೂಕನ್ನೂ ಸೇರಿಸಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಅರಸಾಳು–ರಿಪ್ಪನ್ಪೇಟೆ, ತೀರ್ಥಹಳ್ಳಿ, ಶೃಂಗೇರಿ ಮೂಲಕ ಮಾರ್ಗ ಹಾದು ಹೋಗುವ ಮಾಹಿತಿ ಲಭ್ಯವಾಗಿದೆ. ಹೊಸನಗರ ತಾಲ್ಲೂಕು ಕೇಂದ್ರವಾಗಿದ್ದು, ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನೂ ಕಳೆದುಕೊಂಡಿದೆ. ಹಾಗಾಗಿ ಹೊಸನಗರವನ್ನು ಈ ಯೋಜನೆಯಿಂದ ಹೊರಗಿಡುವ ಯಾವ ಪ್ರಯತ್ನವೂ ನಡೆಯಬಾರದು. ರೈಲ್ವೆ ಮಾರ್ಗ ಅರಸಾಳು, ರಿಪ್ಪನ್ಪೇಟೆ, ಹೊಸನಗರ, ತೀರ್ಥಹಳ್ಳಿ ಮೂಲಕ ಹಾದು ಹೋಗುವಂತೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-42-314969799</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ‘ಮಲೆನಾಡು–ಕರಾವಳಿಯನ್ನು ಸಂಪರ್ಕಿಸುವ ಶಿವಮೊಗ್ಗ–ಶೃಂಗೇರಿ–ಮಂಗಳೂರು ರೈಲು ಮಾರ್ಗ ಹೊಸನಗರ ತಾಲ್ಲೂಕು ಕೇಂದ್ರದ ಮೂಲಕ ಸಾಗಲಿ’ ಎಂದು ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್ ಮಲೇಬೈಲು ಆಗ್ರಹಿಸಿದರು.</p>.<p>‘ಈ ರೈಲು ಮಾರ್ಗದ ಡಿ.ಪಿ.ಆರ್ (ವಿಸ್ತೃತ ಯೋಜನಾ ವರದಿ) ತಯಾರಿಗೆ ಟೆಂಡರ್ ಕರೆಯಲಾಗಿದೆ. ಇದು ಅಂದಾಜು 332 ಕಿ.ಮೀ ಉದ್ದದ ಮಾರ್ಗವಾಗಿದ್ದು, ₹ 3,300 ಕೋಟಿ ಅಂದಾಜು ವೆಚ್ಚದ ಯೋಜನೆಯಾಗಿದೆ. ಇದರ ವ್ಯಾಪ್ತಿಗೆ ಹೊಸನಗರ ತಾಲ್ಲೂಕನ್ನೂ ಸೇರಿಸಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಅರಸಾಳು–ರಿಪ್ಪನ್ಪೇಟೆ, ತೀರ್ಥಹಳ್ಳಿ, ಶೃಂಗೇರಿ ಮೂಲಕ ಮಾರ್ಗ ಹಾದು ಹೋಗುವ ಮಾಹಿತಿ ಲಭ್ಯವಾಗಿದೆ. ಹೊಸನಗರ ತಾಲ್ಲೂಕು ಕೇಂದ್ರವಾಗಿದ್ದು, ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನೂ ಕಳೆದುಕೊಂಡಿದೆ. ಹಾಗಾಗಿ ಹೊಸನಗರವನ್ನು ಈ ಯೋಜನೆಯಿಂದ ಹೊರಗಿಡುವ ಯಾವ ಪ್ರಯತ್ನವೂ ನಡೆಯಬಾರದು. ರೈಲ್ವೆ ಮಾರ್ಗ ಅರಸಾಳು, ರಿಪ್ಪನ್ಪೇಟೆ, ಹೊಸನಗರ, ತೀರ್ಥಹಳ್ಳಿ ಮೂಲಕ ಹಾದು ಹೋಗುವಂತೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-42-314969799</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>