ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸನಗರ: ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

Published 31 ಅಕ್ಟೋಬರ್ 2023, 14:18 IST
Last Updated 31 ಅಕ್ಟೋಬರ್ 2023, 14:18 IST
ಅಕ್ಷರ ಗಾತ್ರ

ಹೊಸನಗರ: ಪಟ್ಟಣದ ಶಾಸಕರ ಮಾದರಿ ಶಾಲೆಯಿಂದ ಜಯನಗರ ಮಾರ್ಗವಾಗಿ 3.9 ಕಿ.ಮೀ. ಹೆದ್ದಾರಿ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಂಗಳವಾರ ಚಾಲನೆ ನೀಡಿದರು.

ರಾಣೆಬೆನ್ನೂರು–ಬೈಂದೂರು ಮಾರ್ಗದ ಈ ಹೆದ್ದಾರಿ ಕಾಮಗಾರಿ ₹ 171 ಕೋಟಿ ವೆಚ್ಚದಲ್ಲಿ ನಡೆಯುತ್ತಿದೆ. 7 ಹಂತದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಹೊಸನಗರ ತಾಲ್ಲೂಕಿನಲ್ಲಿ 27.78 ಕಿ.ಮೀ. ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಿಂದ ಹೊಸನಗರದ ಸೌಂದರ್ಯ ಮತ್ತಷ್ಟು ಹೆಚ್ಚಲಿದೆ ಎಂದು ಅವರು ಹೇಳಿದರು.

ಮುಖಂಡರಾದ ಸಣ್ಣಕ್ಕಿ ಮಂಜು, ಎರಗಿ ಉಮೇಶ್, ಅಶ್ವಿನಿಕುಮಾರ್, ನಾಸಿರ್, ಸದಾಶಿವ ಶೆಟ್ಟಿ, ಚಿದಂಬರ್ ಹೂವಿನಕೋಣೆ, ಶಾಹಿನಾ ನಾಸೀರ್, ಸ್ವಾಮಿ ನೇರ್ಲೆ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT