ಪ್ರತಿ ಬಾರಿ ಮಳೆಗಾಲದಲ್ಲೂಮನೆಗಳಿಗೆ ನೀರು ನುಗ್ಗುತ್ತಿದೆ. ಸುಮಾರು 27 ಮನೆಗಳಿವೆ. ಪ್ರತಿ ಬಾರಿಯೂ ಪ್ರವಾಹ ಬಂದಾಗ ಇಲ್ಲಿನ ನಿವಾಸಿಗಳಿಗೆ ಸಂಕಷ್ಟ ಎದುರಾಗುತ್ತದೆ. ಬೇರೆ ಕಡೆ ಜಾಗ ನೀಡಲಾಗಿದೆ. ಆದರೆ, ಅಲ್ಲಿ ಮೂಲಸೌಕರ್ಯಗಳಾದ ರಸ್ತೆ, ನೀರು, ಚರಂಡಿ, ವಿದ್ಯುತ್ ಕಲ್ಪಿಸಿಲ್ಲ.ಈಗದಿಢೀರ್ತೆರವುಗೊಳಿಸಿದರೆ ಎಲ್ಲಿಗೆ ಹೋಗಬೇಕು? ಏನು ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.