<p><strong>ಶಿವಮೊಗ್ಗ:</strong> ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೃತಪಟ್ಟಿದ್ದ ಆರನೇ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಪ್ರಕರಣ ಸಂಭವಿಸಿ 7 ತಿಂಗಳ ಬಳಿಕ ವ್ಯಕ್ತಿಯ ಗುರುತು ಸಿಕ್ಕಿದೆ.</p>.<p>ಮೃತ ವ್ಯಕ್ತಿ ಭದ್ರಾವತಿಯ ಕೆ.ಎಚ್.ನಗರದ ಆಟೊ ಚಾಲಕ ಶಶಿ (32) ಎಂದು ತಿಳಿದುಬಂದಿದೆ. 2021ರ ಜನವರಿಯಲ್ಲಿ ಹುಣಸೋಡು ಗ್ರಾಮದ ಬಳಿ ಇರುವ ಎಸ್.ಎಸ್.ಕ್ರಷರ್ ಬಳಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಅದರಲ್ಲಿ ಐವರ ಗುರುತು ಪತ್ತೆಯಾಗಿ ಮೃತದೇಹಗಳನ್ನು ಹಸ್ತಾಂತರ ಮಾಡಲಾಗಿತ್ತು. ಆರನೇ ವ್ಯಕ್ತಿಯ ದೇಹ ಸಂಪೂರ್ಣ ಛಿದ್ರವಾಗಿದ್ದರಿಂದ ಗುರುತು ಪತ್ತೆಯಾಗಿರಲಿಲ್ಲ. ಈಗ ಆ ವ್ಯಕ್ತಿಯ ಗುರುತು ಪತ್ತೆಯಾಗಿರುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಛಿದ್ರವಾಗಿದ್ದ ದೇಹದ ಭಾಗಗಳನ್ನು ವಶಕ್ಕೆ ಪೆಡದಿದ್ದ ಪೊಲೀಸರು ಅವುಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ದರು. ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಲ್ಯಾಬ್ಗೆ ಕಳುಹಿಸಲಾಗಿತ್ತು. ಸೆ. 10ರಂದು ಡಿಎನ್ಎ ಪರೀಕ್ಷೆಯ ವರದಿ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೃತಪಟ್ಟಿದ್ದ ಆರನೇ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಪ್ರಕರಣ ಸಂಭವಿಸಿ 7 ತಿಂಗಳ ಬಳಿಕ ವ್ಯಕ್ತಿಯ ಗುರುತು ಸಿಕ್ಕಿದೆ.</p>.<p>ಮೃತ ವ್ಯಕ್ತಿ ಭದ್ರಾವತಿಯ ಕೆ.ಎಚ್.ನಗರದ ಆಟೊ ಚಾಲಕ ಶಶಿ (32) ಎಂದು ತಿಳಿದುಬಂದಿದೆ. 2021ರ ಜನವರಿಯಲ್ಲಿ ಹುಣಸೋಡು ಗ್ರಾಮದ ಬಳಿ ಇರುವ ಎಸ್.ಎಸ್.ಕ್ರಷರ್ ಬಳಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಅದರಲ್ಲಿ ಐವರ ಗುರುತು ಪತ್ತೆಯಾಗಿ ಮೃತದೇಹಗಳನ್ನು ಹಸ್ತಾಂತರ ಮಾಡಲಾಗಿತ್ತು. ಆರನೇ ವ್ಯಕ್ತಿಯ ದೇಹ ಸಂಪೂರ್ಣ ಛಿದ್ರವಾಗಿದ್ದರಿಂದ ಗುರುತು ಪತ್ತೆಯಾಗಿರಲಿಲ್ಲ. ಈಗ ಆ ವ್ಯಕ್ತಿಯ ಗುರುತು ಪತ್ತೆಯಾಗಿರುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಛಿದ್ರವಾಗಿದ್ದ ದೇಹದ ಭಾಗಗಳನ್ನು ವಶಕ್ಕೆ ಪೆಡದಿದ್ದ ಪೊಲೀಸರು ಅವುಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ದರು. ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಲ್ಯಾಬ್ಗೆ ಕಳುಹಿಸಲಾಗಿತ್ತು. ಸೆ. 10ರಂದು ಡಿಎನ್ಎ ಪರೀಕ್ಷೆಯ ವರದಿ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>