ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕಾರಿಪುರ | ವನ್ಯಜೀವಿ ಬೇಟೆ; ಇಬ್ಬರು ಆರೋಪಿಗಳ ಬಂಧನ

Published 20 ಮೇ 2024, 13:49 IST
Last Updated 20 ಮೇ 2024, 13:49 IST
ಅಕ್ಷರ ಗಾತ್ರ

ಶಿಕಾರಿಪುರ: ವನ್ಯಜೀವಿಯನ್ನು ಬೇಟೆಯಾಡಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಅಂಬ್ಲಿಗೊಳ್ಳ ಅರಣ್ಯ ವಲಯ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಲ್ಲೂಕಿನ ನಿವಾಸಿಗಳಾದ ಮಂಜಪ್ಪ (60), ಈಶ್ವರಪ್ಪ (38) ಬಂಧಿತರು. ಆರೋಪಿಗಳಿಂದ ನಾಡ ಬಂದೂಕು ಹಾಗೂ ಮೃತವಾಗಿರುವ ಉಡವನ್ನು ವಶಕ್ಕೆ ಪಡೆಯಲಾಗಿದೆ.

ಅಂಬ್ಲಿಗೊಳ ವಲಯ ವ್ಯಾಪ್ತಿ ಡಿಎಫ್‌ಒ ಸಂತೋಷ್ ಕುಮಾರ್, ಎಸಿಎಫ್ ಸುರೇಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರ್‌ಎಫ್‌ಒ ಮಾಧವ, ಡಿಆರ್‌ಎಫ್‌ಒ ಪ್ರಕಾಶ್, ಚಂದ್ರಪ್ಪ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT