ಹಲವು ಸಂಘ, ಸಂಸ್ಥೆಗಳು, ಅಭಿಮಾನಿಗಳು ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹಿಸಿವೆ. ಅವರ ಅಭಿಮಾನಕ್ಕೆ ಋಣಿ. ಆದರೆ, ನಾನೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ರಾಜಕೀಯಕ್ಕೆ ಬರುತ್ತೇನೆ. ಶಾಸಕ, ಸಚಿವ, ಉಪ ಮುಖ್ಯಮಂತ್ರಿಯಾಗುವೆ ಎಂದು ಕನಸು ಕಂಡಿರಲಿಲ್ಲ. ಪಕ್ಷ ಎಲ್ಲವನ್ನೂ ನೀಡಿದೆ. ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದರು.