<p><strong>ಶಿಕಾರಿಪುರ: </strong>ಒಂದು ಸಂಸ್ಥೆ ಸಧೃಢವಾಗಿ ಬೆಳೆಯಲು ಸಿಬ್ಬಂದಿ ಶ್ರಮ ಹಾಗೂ ಪ್ರಾಮಾಣಿಕ ಸೇವೆ ಅತ್ಯಮೂಲ್ಯ ಎಂದು<br />ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು.</p>.<p>ಪಟ್ಟಣಕ್ಕೆ ಸಮೀಪದಲ್ಲಿ ಭಾನುವಾರ ಶಾಹಿ ಎಕ್ಸ್ಪೋರ್ಟ್ (ಗಾರ್ಮೆಂಟ್ಸ್) ನೂತನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ಭಾಗದಲ್ಲಿ ಗಾರ್ಮೆಂಟ್ಸ್ ಆರಂಭವಾಗಿದ್ದರಿಂದ ಹಲವರಿಗೆ ಉದ್ಯೋಗಾವಕಾಶ ದೊರಕಿದೆ. ಸಂಸ್ಥೆಯು 6ಸಾವಿರ ಜನರಿಗೆ<br />ಉದ್ಯೋಗ ನೀಡುವ ಗುರಿ ಹೊಂದಿದೆ. ರಾಜ್ಯದಲ್ಲಿ ಶೇ 80ರಷ್ಟು ಮಹಿಳೆಯರಿಗೆ ಈ ಸಂಸ್ಥೆಯಲ್ಲಿ ಉದ್ಯೋಗ<br />ನಿರ್ವಹಿಸಲು ಅವಕಾಶ ನೀಡಿದೆ. ಗಾರ್ಮೆಂಟ್ಸ್ ಆರಂಭವಾಗುವ ಮುಂಚೆ ನಿಮ್ಮ ಕುಟುಂಬದ ಪರಿಸ್ಥಿತಿ ಹೇಗಿತ್ತು ? ಈಗ ಹೇಗಿದೆ ಎಂಬುದನ್ನು ಯೋಚಿಸಬೇಕು. ನಿಮ್ಮ ತಂದೆ ತಾಯಿಗಳನ್ನು ನೆಮ್ಮದಿಯಿಂದ ನೋಡಿಕೊಂಡಾಗ ನಿಮ್ಮ ಜೀವನ ಸಾರ್ಥಕವಾಗುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಉದ್ಯೋಗ ದೊರೆಯುವುದು ಕಷ್ಟವಾಗಿದೆ. ಆದ್ದರಿಂದ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಅಗತ್ಯತೆ ಇದೆ. ತಾಲ್ಲೂಕಿನಲ್ಲಿ ಶಾಹಿ ಕಂಪನಿ ಪ್ರಸ್ತುತ 2 ಸಾವಿರ ಉದ್ಯೋಗಗಳನ್ನು ನೀಡಿದೆ. ಶಿವಮೊಗ್ಗ, ಸಾಗರ, ಶಿಕಾರಿಪುರ ಸೇರಿ ಜಿಲ್ಲೆಯಲ್ಲಿ 20 ಸಾವಿರ ಜನರಿಗೆ ಉದ್ಯೋಗ ನೀಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.</p>.<p>‘ಮಹಾರಾಷ್ಟ್ರದ ಪುಣೆಯಲ್ಲಿ ಆರಂಭವಾಗಬೇಕಿದ್ದ ಈ ಗಾರ್ಮೆಂಟ್ಸ್ ಶಿಕಾರಿಪುರದಲ್ಲಿ ಆರಂಭವಾಗಲು ಯಡಿಯೂರಪ್ಪ ಅವರು ಕಾರಣರಾಗಿದ್ದಾರೆ. ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಈ ಸಂಸ್ಥೆ ಅವಕಾಶ ನೀಡಿದೆ. ಯಡಿಯೂರಪ್ಪ ಹಾಗೂ ರಾಘವೇಂದ್ರ ಅವರನ್ನು ಆಶೀರ್ವದಿಸಿದಂತೆ ನನ್ನನ್ನೂ ಆಶೀರ್ವದಿಸಬೇಕು’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದರು.</p>.<p>ಶಾಹಿ ಎಕ್ಸ್ಪೋರ್ಟ್ ಸಂಸ್ಥೆಯ ಅಧ್ಯಕ್ಷ ಆನಂದ್ ಪದ್ಮನಾಬ್, ಸಿಒಒ ಅನ್ಬೂ, ಸಿಬ್ಬಂದಿಯಾದ ಚಿತ್ರಶೇಖರ್, ಆನಂದ್, ಜೀವಿತ್, ದಿನೇಶ್<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ: </strong>ಒಂದು ಸಂಸ್ಥೆ ಸಧೃಢವಾಗಿ ಬೆಳೆಯಲು ಸಿಬ್ಬಂದಿ ಶ್ರಮ ಹಾಗೂ ಪ್ರಾಮಾಣಿಕ ಸೇವೆ ಅತ್ಯಮೂಲ್ಯ ಎಂದು<br />ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು.</p>.<p>ಪಟ್ಟಣಕ್ಕೆ ಸಮೀಪದಲ್ಲಿ ಭಾನುವಾರ ಶಾಹಿ ಎಕ್ಸ್ಪೋರ್ಟ್ (ಗಾರ್ಮೆಂಟ್ಸ್) ನೂತನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ಭಾಗದಲ್ಲಿ ಗಾರ್ಮೆಂಟ್ಸ್ ಆರಂಭವಾಗಿದ್ದರಿಂದ ಹಲವರಿಗೆ ಉದ್ಯೋಗಾವಕಾಶ ದೊರಕಿದೆ. ಸಂಸ್ಥೆಯು 6ಸಾವಿರ ಜನರಿಗೆ<br />ಉದ್ಯೋಗ ನೀಡುವ ಗುರಿ ಹೊಂದಿದೆ. ರಾಜ್ಯದಲ್ಲಿ ಶೇ 80ರಷ್ಟು ಮಹಿಳೆಯರಿಗೆ ಈ ಸಂಸ್ಥೆಯಲ್ಲಿ ಉದ್ಯೋಗ<br />ನಿರ್ವಹಿಸಲು ಅವಕಾಶ ನೀಡಿದೆ. ಗಾರ್ಮೆಂಟ್ಸ್ ಆರಂಭವಾಗುವ ಮುಂಚೆ ನಿಮ್ಮ ಕುಟುಂಬದ ಪರಿಸ್ಥಿತಿ ಹೇಗಿತ್ತು ? ಈಗ ಹೇಗಿದೆ ಎಂಬುದನ್ನು ಯೋಚಿಸಬೇಕು. ನಿಮ್ಮ ತಂದೆ ತಾಯಿಗಳನ್ನು ನೆಮ್ಮದಿಯಿಂದ ನೋಡಿಕೊಂಡಾಗ ನಿಮ್ಮ ಜೀವನ ಸಾರ್ಥಕವಾಗುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಉದ್ಯೋಗ ದೊರೆಯುವುದು ಕಷ್ಟವಾಗಿದೆ. ಆದ್ದರಿಂದ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಅಗತ್ಯತೆ ಇದೆ. ತಾಲ್ಲೂಕಿನಲ್ಲಿ ಶಾಹಿ ಕಂಪನಿ ಪ್ರಸ್ತುತ 2 ಸಾವಿರ ಉದ್ಯೋಗಗಳನ್ನು ನೀಡಿದೆ. ಶಿವಮೊಗ್ಗ, ಸಾಗರ, ಶಿಕಾರಿಪುರ ಸೇರಿ ಜಿಲ್ಲೆಯಲ್ಲಿ 20 ಸಾವಿರ ಜನರಿಗೆ ಉದ್ಯೋಗ ನೀಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.</p>.<p>‘ಮಹಾರಾಷ್ಟ್ರದ ಪುಣೆಯಲ್ಲಿ ಆರಂಭವಾಗಬೇಕಿದ್ದ ಈ ಗಾರ್ಮೆಂಟ್ಸ್ ಶಿಕಾರಿಪುರದಲ್ಲಿ ಆರಂಭವಾಗಲು ಯಡಿಯೂರಪ್ಪ ಅವರು ಕಾರಣರಾಗಿದ್ದಾರೆ. ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಈ ಸಂಸ್ಥೆ ಅವಕಾಶ ನೀಡಿದೆ. ಯಡಿಯೂರಪ್ಪ ಹಾಗೂ ರಾಘವೇಂದ್ರ ಅವರನ್ನು ಆಶೀರ್ವದಿಸಿದಂತೆ ನನ್ನನ್ನೂ ಆಶೀರ್ವದಿಸಬೇಕು’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದರು.</p>.<p>ಶಾಹಿ ಎಕ್ಸ್ಪೋರ್ಟ್ ಸಂಸ್ಥೆಯ ಅಧ್ಯಕ್ಷ ಆನಂದ್ ಪದ್ಮನಾಬ್, ಸಿಒಒ ಅನ್ಬೂ, ಸಿಬ್ಬಂದಿಯಾದ ಚಿತ್ರಶೇಖರ್, ಆನಂದ್, ಜೀವಿತ್, ದಿನೇಶ್<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>