2019ರ ಅ. 19ರಂದು ಆಗುಂಬೆ ಪಿಎಸ್ಐ ದೇವರಾಯ ಠಾಣಾ ವ್ಯಾಪ್ತಿಯ ಕರಿಗದ್ದೆ ಸಮೀಪ ಗೋವು ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದರು. ಆರೋಪಿಗಳ ವಿರುದ್ಧ ಐಪಿಸಿ ಕಲಂ 379, ಕರ್ನಾಟಕ ಗೋವು ಸಂರಕ್ಷಣೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆ 1964ರ ಕಲಂ 4, 5, 11 ಹಾಗೂ ಪ್ರಾಣಿಗಳ ವಿರುದ್ಧ ಕ್ರೌರ್ಯ ನಿಷೇಧ ಮತ್ತು ತಡೆಗಟ್ಟುವಿಕೆ ಕಾಯ್ದೆ 1960ರ ಕಲಂ 11ರ ಅಡಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.