ಶಿವಮೊಗ್ಗ ಸಮೀಪದ ಮಜ್ಜಿಗೆ ಹಳ್ಳಿಯ ಯುವತಿ ಕೆಲಸಕ್ಕೆ ಹೋಗಲು ತಡವಾಗಿದ್ದ ಕಾರಣ ಶಿವಮೊಗ್ಗದ ಗಾಂಧಿ ಬಜಾರ್ವರೆಗೆ ಬಿಡುವಂತೆ ಅದೇ ಮಾರ್ಗದಲ್ಲಿ ಹೊರಟಿದ್ದ ಗ್ರಾಮದ ಯುವಕನನ್ನು ವಿನಂತಿಸಿದ್ದಾರೆ. ಆ ಯುವಕ ಗಾಂಧಿ ಬಜಾರ್ನಲ್ಲಿ ಇಳಿಸಿ ಹಿಂದಿರುಗುವಾಗ ಸ್ಥಳದಲ್ಲೇ ಇದ್ದ ಮುಸ್ಲಿಂ ಯುವಕರು ಅಡ್ಡಗಟ್ಟಿ ಥಳಿಸಿದ್ದಾರೆ.