<p><strong>ಶಿವಮೊಗ್ಗ:</strong> ಮುಸ್ಲಿಂ ಯುವತಿಯನ್ನು ದ್ವಿಚಕ್ರವಾಹನದಲ್ಲಿ ಕರೆದುಕೊಂಡು ಬಂದ ಹಿಂದೂ ಯುವಕನನ್ನು ಶನಿವಾರ ನಗರದ ಟ್ಯಾಂಕ್ ಮೊಹಲ್ಲಾ ಯುವಕರು ಥಳಿಸಿದ್ದಾರೆ.</p>.<p>ಅನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದ ಮೇಲೆ ಸುಹೇಲ್, ಶೋಯೇಬ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ರಾಹಿಂ ಪರಾರಿಯಾಗಿದ್ದಾನೆ.</p>.<p>ಶಿವಮೊಗ್ಗ ಸಮೀಪದ ಮಜ್ಜಿಗೆ ಹಳ್ಳಿಯ ಯುವತಿ ಕೆಲಸಕ್ಕೆ ಹೋಗಲು ತಡವಾಗಿದ್ದ ಕಾರಣ ಶಿವಮೊಗ್ಗದ ಗಾಂಧಿ ಬಜಾರ್ವರೆಗೆ ಬಿಡುವಂತೆ ಅದೇ ಮಾರ್ಗದಲ್ಲಿ ಹೊರಟಿದ್ದ ಗ್ರಾಮದ ಯುವಕನನ್ನು ವಿನಂತಿಸಿದ್ದಾರೆ. ಆ ಯುವಕ ಗಾಂಧಿ ಬಜಾರ್ನಲ್ಲಿ ಇಳಿಸಿ ಹಿಂದಿರುಗುವಾಗ ಸ್ಥಳದಲ್ಲೇ ಇದ್ದ ಮುಸ್ಲಿಂ ಯುವಕರು ಅಡ್ಡಗಟ್ಟಿ ಥಳಿಸಿದ್ದಾರೆ.</p>.<p>ತಕ್ಷಣ ಅಲ್ಲೇ ಇದ್ದ ಹಿಂದೂ ಯುವಕರು ಹೊಡೆದಾಟಕ್ಕೆ ಮುಂದಾಗಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.</p>.<p>‘ಕಿಡಿಗೇಡಿ ಯುವಕರು ಇಂತಹ ಕೃತ್ಯ ಎಸಗಿದ್ದಾರೆ. ತಕ್ಷಣ ಅವರನ್ನು ಬಂಧಿಸಲಾಗಿದೆ. ವದಂತಿ ಹಬ್ಬಿಸದಂತೆ ಸೂಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಮುಸ್ಲಿಂ ಯುವತಿಯನ್ನು ದ್ವಿಚಕ್ರವಾಹನದಲ್ಲಿ ಕರೆದುಕೊಂಡು ಬಂದ ಹಿಂದೂ ಯುವಕನನ್ನು ಶನಿವಾರ ನಗರದ ಟ್ಯಾಂಕ್ ಮೊಹಲ್ಲಾ ಯುವಕರು ಥಳಿಸಿದ್ದಾರೆ.</p>.<p>ಅನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದ ಮೇಲೆ ಸುಹೇಲ್, ಶೋಯೇಬ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ರಾಹಿಂ ಪರಾರಿಯಾಗಿದ್ದಾನೆ.</p>.<p>ಶಿವಮೊಗ್ಗ ಸಮೀಪದ ಮಜ್ಜಿಗೆ ಹಳ್ಳಿಯ ಯುವತಿ ಕೆಲಸಕ್ಕೆ ಹೋಗಲು ತಡವಾಗಿದ್ದ ಕಾರಣ ಶಿವಮೊಗ್ಗದ ಗಾಂಧಿ ಬಜಾರ್ವರೆಗೆ ಬಿಡುವಂತೆ ಅದೇ ಮಾರ್ಗದಲ್ಲಿ ಹೊರಟಿದ್ದ ಗ್ರಾಮದ ಯುವಕನನ್ನು ವಿನಂತಿಸಿದ್ದಾರೆ. ಆ ಯುವಕ ಗಾಂಧಿ ಬಜಾರ್ನಲ್ಲಿ ಇಳಿಸಿ ಹಿಂದಿರುಗುವಾಗ ಸ್ಥಳದಲ್ಲೇ ಇದ್ದ ಮುಸ್ಲಿಂ ಯುವಕರು ಅಡ್ಡಗಟ್ಟಿ ಥಳಿಸಿದ್ದಾರೆ.</p>.<p>ತಕ್ಷಣ ಅಲ್ಲೇ ಇದ್ದ ಹಿಂದೂ ಯುವಕರು ಹೊಡೆದಾಟಕ್ಕೆ ಮುಂದಾಗಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.</p>.<p>‘ಕಿಡಿಗೇಡಿ ಯುವಕರು ಇಂತಹ ಕೃತ್ಯ ಎಸಗಿದ್ದಾರೆ. ತಕ್ಷಣ ಅವರನ್ನು ಬಂಧಿಸಲಾಗಿದೆ. ವದಂತಿ ಹಬ್ಬಿಸದಂತೆ ಸೂಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>