<p>ಕಾರ್ಗಲ್: ಹಿರಿಯರಿಂದ ಬಳುವಳಿಯಾಗಿ ದೊರೆತ ಜಮೀನಿನಲ್ಲಿ ಪಾರಂಪರಿಕ ಕೃಷಿ ಪದ್ಧತಿಯೊಂದಿಗೆ ವಾಣಿಜ್ಯ ಬೆಳೆ ಬೆಳೆದು ಉತ್ತಮ ಆದಾಯ ಕಂಡುಕೊಂಡ ಸಾಗರ ತಾಲ್ಲೂಕು ಭಾರಂಗಿ ಹೋಬಳಿಯ ಬಿದರೂರು ಗ್ರಾಮದ ಯುವ ಕೃಷಿಕ ಮೋಹನ ಕುಮಾರ್ ಜೈನ್ ಗಮನ ಸೆಳೆದಿದ್ದಾರೆ.</p>.<p>ಒಟ್ಟು 3 ಎಕರೆ ಜಮೀನಿನಲ್ಲಿ ಅರ್ಧ ಪಾಲು ಅಡಿಕೆ ಕೃಷಿಗೆ ಮೀಸಲಿಟ್ಟು, ಇನ್ನುಳಿದ ಅರ್ಧಭಾಗದಲ್ಲಿ ತೆಂಗು, ಬಾಳೆ, ಕಾಳುಮೆಣಸು, ಅರಿಸಿನ, ಕಬ್ಬು, ಗಜನಿಂಬೆ, ಲವಂಗ, ಜಾಯಿಕಾಯಿ, ಗೇರು, ಹಲಸು, ಮಾವು ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸಿದ್ದಾರೆ.</p>.<p>ಜಮೀನಿನ ಎತ್ತರದ ದಿಣ್ಣೆಯಲ್ಲಿ ಕೆರೆ ತೋಡಿ, ಗಿಡ ಮರಗಳಿಗೆ ನೀರುಣಿಸುವ ಕೆಲಸ ಮಾಡುತ್ತಿದ್ದಾರೆ. 750ಕ್ಕೂ ಹೆಚ್ಚು ಗೇರು ಗಿಡಗಳನ್ನು ಬೆಳೆಯುವ ಮೂಲಕ ವೆಚ್ಚವಿಲ್ಲದೆ ಆದಾಯದ ಮೂಲವನ್ನು ಕಂಡುಕೊಂಡಿದ್ದಾರೆ. 3 ಎಕರೆ ಜಮೀನಿನ ಸುತ್ತಲೂ ಲವಂಗದ ಗಿಡಗಳನ್ನು ಬೆಳೆಸಿ ಕೃಷಿ ಭೂಮಿಯ ಬೇಲಿಗೆ ಬೆಂಗಾವಲಾಗಿ ನಿಲ್ಲುವಲ್ಲಿ ಯಶಸ್ಸು ಕಂಡಿದ್ದಾರೆ.</p>.<p>ತಮ್ಮ ಅಡಿಕೆ ತೋಟದಲ್ಲಿ ಬಳಸುವ ಔಷಧಗಳ ಸಿಂಪಡಣೆ ಗಿಡಗಳ ಮೇಲಿನಿಂದ ಕೆಳಗೆ ಬಿದ್ದು ವ್ಯಯವಾಗದ ರೀತಿಯಲ್ಲಿ ಬಾಳೆಗಿಡಗಳನ್ನು ನೆಡಲಾಗಿದೆ.<br />ಅದೇ ರೀತಿ ಅಡಿಕೆ ಮರದ ಕೆಳಹಂತದ ಸಾಲಿನಲ್ಲಿ ಏಲಕ್ಕಿ ಗಿಡಗಳನ್ನು ಬೆಳೆದು ಶ್ರಮವಿಲ್ಲದೆ ಅವುಗಳನ್ನು ಬೆಳೆಯಲು ಪೂರಕವಾದ ವ್ಯವಸ್ಥೆ ಮಾಡಿಕೊಂಡಿದ್ದಾರೆ.</p>.<p>‘ಕೃಷಿ ಚಟುವಟಿಕೆಯ ಜತೆಗೆ ಕೃಷಿ ಪರಿಕರಗಳ ಮಾರಾಟ ಮಳಿಗೆಯನ್ನು ಕಾರ್ಗಲ್ ಪಟ್ಟಣದಲ್ಲಿ ನಡೆಸುತ್ತಿದ್ದು, ನಾನು ವೃತ್ತಿಯಲ್ಲಿ ಕೃಷಿಕ, ಪ್ರವೃತ್ತಿಯಲ್ಲಿ ವ್ಯಾಪಾರಿ’ ಎಂದು ಮೋಹನ ಕುಮಾರ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.</p>.<p>ತಂದೆ, ತಾಯಿ, ತಮ್ಮ ಮತ್ತು ಹೆಂಡತಿಯೊಂದಿಗೆ ಸದಾ ಕೃಷಿಪರ ಆಲೋಚನೆಗಳಲ್ಲಿ ತೊಡಗಿಕೊಳ್ಳುವ ಈ ಕುಟುಂಬದ ಪ್ರತಿಯೊಬ್ಬರೂ ಬೇಸಾಯ ಪದ್ಧತಿಯ ಬಗ್ಗೆ ಹೆಚ್ಚಿನ ಅರಿವು ಉಳ್ಳವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರ್ಗಲ್: ಹಿರಿಯರಿಂದ ಬಳುವಳಿಯಾಗಿ ದೊರೆತ ಜಮೀನಿನಲ್ಲಿ ಪಾರಂಪರಿಕ ಕೃಷಿ ಪದ್ಧತಿಯೊಂದಿಗೆ ವಾಣಿಜ್ಯ ಬೆಳೆ ಬೆಳೆದು ಉತ್ತಮ ಆದಾಯ ಕಂಡುಕೊಂಡ ಸಾಗರ ತಾಲ್ಲೂಕು ಭಾರಂಗಿ ಹೋಬಳಿಯ ಬಿದರೂರು ಗ್ರಾಮದ ಯುವ ಕೃಷಿಕ ಮೋಹನ ಕುಮಾರ್ ಜೈನ್ ಗಮನ ಸೆಳೆದಿದ್ದಾರೆ.</p>.<p>ಒಟ್ಟು 3 ಎಕರೆ ಜಮೀನಿನಲ್ಲಿ ಅರ್ಧ ಪಾಲು ಅಡಿಕೆ ಕೃಷಿಗೆ ಮೀಸಲಿಟ್ಟು, ಇನ್ನುಳಿದ ಅರ್ಧಭಾಗದಲ್ಲಿ ತೆಂಗು, ಬಾಳೆ, ಕಾಳುಮೆಣಸು, ಅರಿಸಿನ, ಕಬ್ಬು, ಗಜನಿಂಬೆ, ಲವಂಗ, ಜಾಯಿಕಾಯಿ, ಗೇರು, ಹಲಸು, ಮಾವು ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸಿದ್ದಾರೆ.</p>.<p>ಜಮೀನಿನ ಎತ್ತರದ ದಿಣ್ಣೆಯಲ್ಲಿ ಕೆರೆ ತೋಡಿ, ಗಿಡ ಮರಗಳಿಗೆ ನೀರುಣಿಸುವ ಕೆಲಸ ಮಾಡುತ್ತಿದ್ದಾರೆ. 750ಕ್ಕೂ ಹೆಚ್ಚು ಗೇರು ಗಿಡಗಳನ್ನು ಬೆಳೆಯುವ ಮೂಲಕ ವೆಚ್ಚವಿಲ್ಲದೆ ಆದಾಯದ ಮೂಲವನ್ನು ಕಂಡುಕೊಂಡಿದ್ದಾರೆ. 3 ಎಕರೆ ಜಮೀನಿನ ಸುತ್ತಲೂ ಲವಂಗದ ಗಿಡಗಳನ್ನು ಬೆಳೆಸಿ ಕೃಷಿ ಭೂಮಿಯ ಬೇಲಿಗೆ ಬೆಂಗಾವಲಾಗಿ ನಿಲ್ಲುವಲ್ಲಿ ಯಶಸ್ಸು ಕಂಡಿದ್ದಾರೆ.</p>.<p>ತಮ್ಮ ಅಡಿಕೆ ತೋಟದಲ್ಲಿ ಬಳಸುವ ಔಷಧಗಳ ಸಿಂಪಡಣೆ ಗಿಡಗಳ ಮೇಲಿನಿಂದ ಕೆಳಗೆ ಬಿದ್ದು ವ್ಯಯವಾಗದ ರೀತಿಯಲ್ಲಿ ಬಾಳೆಗಿಡಗಳನ್ನು ನೆಡಲಾಗಿದೆ.<br />ಅದೇ ರೀತಿ ಅಡಿಕೆ ಮರದ ಕೆಳಹಂತದ ಸಾಲಿನಲ್ಲಿ ಏಲಕ್ಕಿ ಗಿಡಗಳನ್ನು ಬೆಳೆದು ಶ್ರಮವಿಲ್ಲದೆ ಅವುಗಳನ್ನು ಬೆಳೆಯಲು ಪೂರಕವಾದ ವ್ಯವಸ್ಥೆ ಮಾಡಿಕೊಂಡಿದ್ದಾರೆ.</p>.<p>‘ಕೃಷಿ ಚಟುವಟಿಕೆಯ ಜತೆಗೆ ಕೃಷಿ ಪರಿಕರಗಳ ಮಾರಾಟ ಮಳಿಗೆಯನ್ನು ಕಾರ್ಗಲ್ ಪಟ್ಟಣದಲ್ಲಿ ನಡೆಸುತ್ತಿದ್ದು, ನಾನು ವೃತ್ತಿಯಲ್ಲಿ ಕೃಷಿಕ, ಪ್ರವೃತ್ತಿಯಲ್ಲಿ ವ್ಯಾಪಾರಿ’ ಎಂದು ಮೋಹನ ಕುಮಾರ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.</p>.<p>ತಂದೆ, ತಾಯಿ, ತಮ್ಮ ಮತ್ತು ಹೆಂಡತಿಯೊಂದಿಗೆ ಸದಾ ಕೃಷಿಪರ ಆಲೋಚನೆಗಳಲ್ಲಿ ತೊಡಗಿಕೊಳ್ಳುವ ಈ ಕುಟುಂಬದ ಪ್ರತಿಯೊಬ್ಬರೂ ಬೇಸಾಯ ಪದ್ಧತಿಯ ಬಗ್ಗೆ ಹೆಚ್ಚಿನ ಅರಿವು ಉಳ್ಳವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>