ಶಿವಮೊಗ್ಗ: ನಗರದ ಸ್ವಾಮಿ ವಿವೇಕಾನಂದ ಬಡಾವಣೆ ಹಾಗೂ ಗೋಪಾಲಗೌಡ ಬಡಾವಣೆಯಲ್ಲಿ ಕಳವು, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ನಿವಾಸಿಗಳೇ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ. ನಿವಾಸಿಗಳೇ ಗಸ್ತು ನಡೆಸುತ್ತಿದ್ದಾರೆ.
‘ದರೋಡೆ ಪ್ರಕರಣದಿಂದ ಜನರು ಓಡಾಡಲೂ ಭಯಪಡುವಂತಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ನಾವೇ ಸ್ವಯಂ ರಕ್ಷಣೆಗೆ ಗುಸ್ತು ಕೈಗೊಂಡಿದ್ದೇವೆ’ ಎಂದು ನಿವಾಸಿಗಳು ಹೇಳಿದರು.
ಸ್ಥಳೀಯರು ಒಟ್ಟಾಗಿ ಸೇರಿ ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದಾರೆ.