‘ಗ್ರಾಮೀಣ ರೈತ ಸಮುದಾಯ ಹೆಚ್ಚಿನ ಇಳುವರಿ, ಆರ್ಥಿಕ ಅಭಿವೃದ್ಧಿಗಾಗಿ ಅಧಿಕ ಪ್ರಮಾಣದ ರಸಗೊಬ್ಬರ, ಕ್ರಿಮಿನಾಶಕ ಬಳಸುತ್ತಿದೆ. ಇದು ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ಬೀರುತ್ತಿದೆ. ಗ್ರಾಮೀಣ ಜನರಿಗೂ ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಗಳು ಬರಲು ಕಾರಣವಾಗಿದೆ ಎನ್ನುವುದು ಸಂಶೋಧನೆಯಿಂದ ಬಹಿರಂಗಗೊಂಡಿದೆ. ಹಾಗಾಗಿ, ರಸಗೊಬ್ಬರ, ಕ್ರಿಮಿನಾಶಕ ಬಳಕೆಗೆ ಕಡಿವಾಣ ಹಾಕಬೇಕು’ ಎಂದರು.