ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನ ಸರ್ಕಾರಿ ಕಚೇರಿಗಳಲ್ಲಿನ ಅವ್ಯವಸ್ಥೆ ಕುರಿತು ಹೇಳುವವರಿಲ್ಲ, ಕೇಳುವವರಿಲ್ಲ ಎನ್ನುವಂತಾಗಿದೆ. ಹೆಚ್ಚಿನ ಕಚೇರಿಗಳಲ್ಲಿ ದೀರ್ಘಕಾಲದಿಂದ ಅದೇ ಅಧಿಕಾರಿಗಳು, ನೌಕರರು ಠಿಕಾಣಿ ಹೂಡಿದ್ದು, ಅವರನ್ನು ನಿಯಂತ್ರಿಸಲು ಸಾಧ್ಯವಾಗದ ವಾತಾವರಣ ನಿರ್ಮಾಣವಾಗಿದೆ’ ಎಂದು ದೂರಿದರು.