<p><strong>ಸೊರಬ</strong>: ‘ಅತಿಥಿಗಳನ್ನು ದೇವರ ಸ್ವರೂಪದಲ್ಲಿ ಕಾಣುವ ಭಾರತೀಯ ಸಂಸ್ಕೃತಿಯು ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾಗಿದೆ’ ಎಂದು ಜಡೆ ಸಂಸ್ಥಾನ ಮಠದ ಮಹಾಂತ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಏಕಾದಶಿ ಪ್ರಯುಕ್ತ ಸಾಧು, ಸಂತರ ಸಮಾಗಮ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಅನೇಕ ಸಾಧು, ಸಂತರು ಎಲೆಮರೆಯ ಕಾಯಿಯಂತೆ ಸಮಾಜ ಸುಧಾರಣೆಯಲ್ಲಿ ತೊಡಗಿದ್ದಾರೆ. ಆಧ್ಯಾತ್ಮಿಕ ವಿಚಾರಗಳನ್ನು ಒಳ್ಳೆಯ ಚಿಂತನೆ, ಸತ್ಸಂಗಗಳನ್ನು ಹೊಂದಿರುವ ಮಠ– ಮಾನ್ಯಗಳಲ್ಲಿ ಹಿಂದಿನಿಂದಲೂ ಅತಿಥಿಗಳಿಗೆ ಸತ್ಕಾರ ನೀಡುವ ಪರಂಪರೆ ಹೊಂದಿರುವುದು ವಿಶೇಷವಾಗಿದೆ’ ಎಂದು ತಿಳಿಸಿದರು.</p>.<p>ಋಷಿಕೇಷಿಯ ಯೋಗಾಶ್ರಮದ ರುದ್ರದೇವ ಸ್ವಾಮೀಜಿ, ಜಡೆ ಮಠದ ಕೆಂಪಿನ ಸಿದ್ಧವೃಷಭೇಂದ್ರ ಸ್ವಾಮೀಜಿ ಮಾತನಾಡಿದರು. ಅಜ್ಜಂಪುರ ಶಿವಾನಂದಾಶ್ರಮದ ಚಿದಾನಂದಗಿರಿ, ಹೇಮಾಂಶು ರಾವತ್, ರವೀಂದ್ರ ಪ್ರಸಾದ್, ಬಸವರಾಜಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ</strong>: ‘ಅತಿಥಿಗಳನ್ನು ದೇವರ ಸ್ವರೂಪದಲ್ಲಿ ಕಾಣುವ ಭಾರತೀಯ ಸಂಸ್ಕೃತಿಯು ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾಗಿದೆ’ ಎಂದು ಜಡೆ ಸಂಸ್ಥಾನ ಮಠದ ಮಹಾಂತ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಏಕಾದಶಿ ಪ್ರಯುಕ್ತ ಸಾಧು, ಸಂತರ ಸಮಾಗಮ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ದೇಶದಲ್ಲಿ ಅನೇಕ ಸಾಧು, ಸಂತರು ಎಲೆಮರೆಯ ಕಾಯಿಯಂತೆ ಸಮಾಜ ಸುಧಾರಣೆಯಲ್ಲಿ ತೊಡಗಿದ್ದಾರೆ. ಆಧ್ಯಾತ್ಮಿಕ ವಿಚಾರಗಳನ್ನು ಒಳ್ಳೆಯ ಚಿಂತನೆ, ಸತ್ಸಂಗಗಳನ್ನು ಹೊಂದಿರುವ ಮಠ– ಮಾನ್ಯಗಳಲ್ಲಿ ಹಿಂದಿನಿಂದಲೂ ಅತಿಥಿಗಳಿಗೆ ಸತ್ಕಾರ ನೀಡುವ ಪರಂಪರೆ ಹೊಂದಿರುವುದು ವಿಶೇಷವಾಗಿದೆ’ ಎಂದು ತಿಳಿಸಿದರು.</p>.<p>ಋಷಿಕೇಷಿಯ ಯೋಗಾಶ್ರಮದ ರುದ್ರದೇವ ಸ್ವಾಮೀಜಿ, ಜಡೆ ಮಠದ ಕೆಂಪಿನ ಸಿದ್ಧವೃಷಭೇಂದ್ರ ಸ್ವಾಮೀಜಿ ಮಾತನಾಡಿದರು. ಅಜ್ಜಂಪುರ ಶಿವಾನಂದಾಶ್ರಮದ ಚಿದಾನಂದಗಿರಿ, ಹೇಮಾಂಶು ರಾವತ್, ರವೀಂದ್ರ ಪ್ರಸಾದ್, ಬಸವರಾಜಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>