ಅಗತ್ಯ ವ್ಯವಸ್ಥೆ ಮಾಡಿ: ಆನವಟ್ಟಿ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ಸೋಂಕಿತರಿಗೆ ಒಂದು ಆಂಬುಲೆನ್ಸ್ ಮಾತ್ರ ಇದ್ದು, ತೀವ್ರ ಉಸಿರಾಟದ ತೊಂದರೆ ಇರುವವರಿಗೆ ಜಿಲ್ಲಾ ಆಸ್ಪತ್ರೆಗೆ ಸಕಾಲಕ್ಕೆ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆನವಟ್ಟಿ ಭಾಗಕ್ಕೆ ಇನ್ನೂ ಎರಡು ಆಂಬುಲೆನ್ಸ್ಗಳನ್ನು ನೀಡಬೇಕು. ಕ್ಷೇತ್ರದ ಶಾಸಕರು ಹಾಗೂ ಸಂಸದರು ಹೆಚ್ಚಿನ ಒತ್ತು ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅನೀಶ್ ಪಾಟೀಲ್ ಮನವಿ ಮಾಡಿದ್ದಾರೆ.