<p><strong>ತೀರ್ಥಹಳ್ಳಿ</strong>: ಕಂದಾಯ ಇಲಾಖೆ ಹೊರಡಿಸಿದ ಅದೇಶದಂತೆ ವ್ಯವಸಾಯ ಉದ್ದೇಶಕ್ಕೆ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಗುರುವಾರ ತಾಲ್ಲೂಕು ಕಚೇರಿ ಮುಂಭಾಗ ಮಾಜಿ ಸೈನಿಕರು ಪ್ರತಿಭಟನೆ ನಡೆಸಿದರು.</p>.<p>ಸರ್ಕಾರಿ ಬಂಜರು, ಸರ್ಕಾರಿ ಬೀಳು, ಗೋಮಾಳ, ಸೊಪ್ಪಿನಬೆಟ್ಟ ಇತ್ಯಾದಿ ಜಾಗದಲ್ಲಿ ಭೂಮಿ ಮಂಜೂರು ಮಾಡಬೇಕು. ಒತ್ತುವರಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಆಗಿವೆ. ಸೈನಿಕರ ಅರ್ಜಿಗೆ ಹಿಂಬರಹ ಸಿಗುತ್ತಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶಿವಪ್ಪಕೆ.ಎನ್. ದೂರಿದರು.</p>.<p>ರಾಜ ಮಹಾರಾಜರ ಕಾಲದಿಂದ ಸ್ವಾತಂತ್ರ್ಯಾನಂತರವೂ ಪ್ರತಿ ಗ್ರಾಮದಲ್ಲಿ 100 ಎಕರೆ ಭೂಮಿಯಲ್ಲಿ 10 ಎಕರೆ ಕೃಷಿ ಯೋಗ್ಯ ಭೂಮಿಯನ್ನು ಸೈನಿಕರಿಗೆ ನೀಡಲಾಗಿದೆ. ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸೈನಿಕರ ಸೇವೆಯನ್ನು ಪರಿಗಣಿಸದೆ ಇತ್ತೀಚೆಗೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು.</p>.<p>ವಿಶೇಷ ಕೋಟಾದ ಅಡಿಯಲ್ಲಿ ಸೈನಿಕರಿಗೆ ಜಮೀನು ಮಂಜೂರು ಮಾಡುವಾಗ ಬಗರ್ಹುಕುಂ ಮಾನದಂಡಗಳನ್ನು ಪರಿಗಣಿಸದೆ ಜಾಗ ಮಂಜೂರು ಮಾಡಲು ಕ್ರಮ ವಹಿಸಬೇಕು ಎಂದು ಸೈನಿಕರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ</strong>: ಕಂದಾಯ ಇಲಾಖೆ ಹೊರಡಿಸಿದ ಅದೇಶದಂತೆ ವ್ಯವಸಾಯ ಉದ್ದೇಶಕ್ಕೆ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಗುರುವಾರ ತಾಲ್ಲೂಕು ಕಚೇರಿ ಮುಂಭಾಗ ಮಾಜಿ ಸೈನಿಕರು ಪ್ರತಿಭಟನೆ ನಡೆಸಿದರು.</p>.<p>ಸರ್ಕಾರಿ ಬಂಜರು, ಸರ್ಕಾರಿ ಬೀಳು, ಗೋಮಾಳ, ಸೊಪ್ಪಿನಬೆಟ್ಟ ಇತ್ಯಾದಿ ಜಾಗದಲ್ಲಿ ಭೂಮಿ ಮಂಜೂರು ಮಾಡಬೇಕು. ಒತ್ತುವರಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಆಗಿವೆ. ಸೈನಿಕರ ಅರ್ಜಿಗೆ ಹಿಂಬರಹ ಸಿಗುತ್ತಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶಿವಪ್ಪಕೆ.ಎನ್. ದೂರಿದರು.</p>.<p>ರಾಜ ಮಹಾರಾಜರ ಕಾಲದಿಂದ ಸ್ವಾತಂತ್ರ್ಯಾನಂತರವೂ ಪ್ರತಿ ಗ್ರಾಮದಲ್ಲಿ 100 ಎಕರೆ ಭೂಮಿಯಲ್ಲಿ 10 ಎಕರೆ ಕೃಷಿ ಯೋಗ್ಯ ಭೂಮಿಯನ್ನು ಸೈನಿಕರಿಗೆ ನೀಡಲಾಗಿದೆ. ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸೈನಿಕರ ಸೇವೆಯನ್ನು ಪರಿಗಣಿಸದೆ ಇತ್ತೀಚೆಗೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು.</p>.<p>ವಿಶೇಷ ಕೋಟಾದ ಅಡಿಯಲ್ಲಿ ಸೈನಿಕರಿಗೆ ಜಮೀನು ಮಂಜೂರು ಮಾಡುವಾಗ ಬಗರ್ಹುಕುಂ ಮಾನದಂಡಗಳನ್ನು ಪರಿಗಣಿಸದೆ ಜಾಗ ಮಂಜೂರು ಮಾಡಲು ಕ್ರಮ ವಹಿಸಬೇಕು ಎಂದು ಸೈನಿಕರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>