<p><strong>ಶಿವಮೊಗ್ಗ: </strong>ಅಪರಾಧ ತಡೆಯುವಲ್ಲಿ ಸಿ.ಸಿ ಟಿವಿ ಕ್ಯಾಮೆರಾ ನೆರವಾಗುತ್ತವೆ. ಹೀಗಾಗಿ ಜಿಲ್ಲೆಯ ಎಲ್ಲ ಚಿನ್ನಾಭರಣ ಅಂಗಡಿಗಳಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆ ಅನ್ವಯ ಸಿ.ಸಿ.ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಸೂಚಿಸಿದರು.</p>.<p>ನಗರದಲ್ಲಿ ಶನಿವಾರ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಶಿವಮೊಗ್ಗದ ನಗರದ ಚಿನ್ನ, ಬೆಳ್ಳಿ ಹಾಗೂ ಗಿರವಿ ವರ್ತಕರ ಸಂಘದ ಸದಸ್ಯರ ಸಭೆ ನಡೆಸಿ ಅವರ ಕುಂದುಕೊರತೆ ಆಲಿಸಿ ಮಾತನಾಡಿದರು.</p>.<p>ಕೆಲವು ಚಿನ್ನಾಭರಣ ಅಂಗಡಿಯವರು ಸಿ.ಸಿಟಿವಿ ಕ್ಯಾಮೆರಾ ಅಳವಡಿಸಿಲ್ಲ. ಕ್ಯಾಮೆರಾ ಅಳವಡಿಸಿದಲ್ಲಿ ಯಾವುದೇ ಘಟನೆ ನಡೆದಾಗ, ತ್ವರಿತಗತಿಯಲ್ಲಿ ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಹಕಾರಿಯಾಗುತ್ತದೆ. ತಮ್ಮ ಸ್ವತ್ತಿನ ಸುರಕ್ಷತೆಯ ದೃಷ್ಟಿಯಿಂದ ಮನೆಗಳ ಹತ್ತಿರವೂ ಸಿಸಿ ಕ್ಯಾಮೆರಾಗಳ ಅಳವಡಿಸುವುದು ಸೂಕ್ತ ಎಂದರು.</p>.<p>ಚಿನ್ನಾಭರಣ ಮಾರಾಟಗಾರರು ತಮ್ಮ ಅಂಗಡಿಗಳ ಸುರಕ್ಷತೆಗಾಗಿ ಭದ್ರತಾ ಸಿಬ್ಬಂದಿ ನೇಮಕ ಮಾಡಿಕೊಳ್ಳುವಾಗ ಮಾನ್ಯತೆ ಪಡೆದ ಮತ್ತು ಪ್ರಮಾಣೀಕೃತ ಭದ್ರತಾ ಸಂಸ್ಥೆಗಳಿಂದ ತರಬೇತಿ ಹೊಂದಿದ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು ಎಂದರು.</p>.<p>ಕಳ್ಳತನದಿಂದ ತಂದ ಆಭರಣಗಳನ್ನು ಮಾರಾಟ ಮಾಡಲು ಬಂದಲ್ಲಿ ಸ್ವೀಕರಿಸಬಾರದು. ಕಳ್ಳತನದ<br />ಆಭರಣ ಎಂಬ ಅನುಮಾನ ಬಂದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಿದರು.<br />ಡಿವೈಎಸ್ಪಿ ಬಾಲರಾಜ್, ಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹಾಗೂ ಶಿವಮೊಗ್ಗದ ಚಿನ್ನ, ಬೆಳ್ಳಿ ಹಾಗೂ ಗಿರವಿ ವರ್ತಕರ ಸಂಘದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಅಪರಾಧ ತಡೆಯುವಲ್ಲಿ ಸಿ.ಸಿ ಟಿವಿ ಕ್ಯಾಮೆರಾ ನೆರವಾಗುತ್ತವೆ. ಹೀಗಾಗಿ ಜಿಲ್ಲೆಯ ಎಲ್ಲ ಚಿನ್ನಾಭರಣ ಅಂಗಡಿಗಳಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆ ಅನ್ವಯ ಸಿ.ಸಿ.ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಸೂಚಿಸಿದರು.</p>.<p>ನಗರದಲ್ಲಿ ಶನಿವಾರ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಶಿವಮೊಗ್ಗದ ನಗರದ ಚಿನ್ನ, ಬೆಳ್ಳಿ ಹಾಗೂ ಗಿರವಿ ವರ್ತಕರ ಸಂಘದ ಸದಸ್ಯರ ಸಭೆ ನಡೆಸಿ ಅವರ ಕುಂದುಕೊರತೆ ಆಲಿಸಿ ಮಾತನಾಡಿದರು.</p>.<p>ಕೆಲವು ಚಿನ್ನಾಭರಣ ಅಂಗಡಿಯವರು ಸಿ.ಸಿಟಿವಿ ಕ್ಯಾಮೆರಾ ಅಳವಡಿಸಿಲ್ಲ. ಕ್ಯಾಮೆರಾ ಅಳವಡಿಸಿದಲ್ಲಿ ಯಾವುದೇ ಘಟನೆ ನಡೆದಾಗ, ತ್ವರಿತಗತಿಯಲ್ಲಿ ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಹಕಾರಿಯಾಗುತ್ತದೆ. ತಮ್ಮ ಸ್ವತ್ತಿನ ಸುರಕ್ಷತೆಯ ದೃಷ್ಟಿಯಿಂದ ಮನೆಗಳ ಹತ್ತಿರವೂ ಸಿಸಿ ಕ್ಯಾಮೆರಾಗಳ ಅಳವಡಿಸುವುದು ಸೂಕ್ತ ಎಂದರು.</p>.<p>ಚಿನ್ನಾಭರಣ ಮಾರಾಟಗಾರರು ತಮ್ಮ ಅಂಗಡಿಗಳ ಸುರಕ್ಷತೆಗಾಗಿ ಭದ್ರತಾ ಸಿಬ್ಬಂದಿ ನೇಮಕ ಮಾಡಿಕೊಳ್ಳುವಾಗ ಮಾನ್ಯತೆ ಪಡೆದ ಮತ್ತು ಪ್ರಮಾಣೀಕೃತ ಭದ್ರತಾ ಸಂಸ್ಥೆಗಳಿಂದ ತರಬೇತಿ ಹೊಂದಿದ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು ಎಂದರು.</p>.<p>ಕಳ್ಳತನದಿಂದ ತಂದ ಆಭರಣಗಳನ್ನು ಮಾರಾಟ ಮಾಡಲು ಬಂದಲ್ಲಿ ಸ್ವೀಕರಿಸಬಾರದು. ಕಳ್ಳತನದ<br />ಆಭರಣ ಎಂಬ ಅನುಮಾನ ಬಂದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಿದರು.<br />ಡಿವೈಎಸ್ಪಿ ಬಾಲರಾಜ್, ಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹಾಗೂ ಶಿವಮೊಗ್ಗದ ಚಿನ್ನ, ಬೆಳ್ಳಿ ಹಾಗೂ ಗಿರವಿ ವರ್ತಕರ ಸಂಘದ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>