<p>ಶಿವಮೊಗ್ಗ: ಸೇವಾ ನ್ಯೂನತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಅರ್ಜಿದಾರರಿಗೆ ವಿಮಾ ಮೊತ್ತ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.</p>.<p>ಅರ್ಜಿದಾರರಾದ ಸಿ.ಡಿ ರವಿರಾಜ್ ಅವರು ಎಚ್ಡಿಎಫ್ಸಿ-ಇಆರ್ಜಿಒ ಜನರಲ್ ಇನ್ಶೂರೆನ್ಸ್ ಕಂಪೆನಿ ವಿರುದ್ದ ಅರ್ಜಿ ಸಲ್ಲಿಸಿದ್ದರು.</p>.<p>ಅರ್ಜಿದಾರರು ಬಿಎಎಂಎಸ್ ವೈದ್ಯರಾಗಿದ್ದು, ಎಚ್ಡಿಎಫ್ಸಿ-ಇಆರ್ಜಿಒ ಜನರಲ್ ಇನ್ಶೂರೆನ್ಸ್ ಕಂಪೆನಿ ₹6 ಲಕ್ಷ ಪರಿಹಾರ ಮೊತ್ತವನ್ನು ಒಳಗೊಂಡ ಹೆಲ್ತ್ ಇನ್ಶೂರೆನ್ಸ್ ಪಾಲಿಸಿಯನ್ನು 2021ರಲ್ಲಿ ಪಡೆದಿದ್ದರು.</p>.<p>ಅರ್ಜಿದಾರರು 2021ರ ಆಗಸ್ಟ್ 2ರಂದು ಕೊರೊನಾ ಸೋಂಕಿಗೆ ಒಳಗಾಗಿ ಹಲವು ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಒಟ್ಟು ₹4,08,564 ವೆಚ್ಚವಾಗಿತ್ತು. ಅರ್ಜಿದಾರರು ವಿಮಾ ಕಂಪೆನಿಗೆ ವೈದ್ಯಕೀಯ ವೆಚ್ಚದ ಮರುಪಾವತಿ ಅರ್ಜಿ ಸಲ್ಲಿಸಿದಾಗ, ವಿಮಾ ಪರಿಹಾರ ನೀಡಲು ನಿರಾಕರಿಸಿದ್ದರು. ನಕಲಿ ದಾಖಲೆ ಸೃಷ್ಟಿಸಿ ತಪ್ಪಾಗಿ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದು ಕಾರಣ ನೀಡಿದ್ದರು. ಅಲ್ಲದೇ, ವಿಮಾ ಪಾಲಿಸಿಯನ್ನೂ ರದ್ದುಪಡಿಸಿದ್ದರು.</p>.<p>ಗ್ರಾಹಕರ ಆಯೋಗವು ಪ್ರಕರಣವನ್ನು ಪಕ್ಷಗಾರರು ಹಾಜರುಪಡಿಸಿದ ವೈದ್ಯಕೀಯ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿತು. ವಿಮಾ ಕಂಪೆನಿಯ ನಿರಾಕರಣೆಯು ಸೇವಾ ನ್ಯೂನತೆಯಿಂದ ಕೂಡಿದೆ ಎಂದು ತೀರ್ಮಾನಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸಿತು. </p>.<p>ವಿಮಾ ಕಂಪೆನಿಯು ಈ ಆದೇಶವಾದ 45 ದಿನಗಳೊಳಗಾಗಿ ಅರ್ಜಿದಾರರು ಪಡೆದಿದ್ದ ಪಾಲಿಸಿ ಪುನರುಜ್ಜೀವಗೊಳಿಸಬೇಕು ಹಾಗೂ ವಿಮಾ ಪರಿಹಾರ ಮೊತ್ತ ₹4,08,165 ಅನ್ನು ವಾರ್ಷಿಕ ಬಡ್ಡಿ ಶೇ 9 ಸಮೇತ ಪಾವತಿಸತಕ್ಕದ್ದು ಮತ್ತು ಮಾನಸಿಕ ಹಾನಿಗೆ ಪರಿಹಾರವಾಗಿ ₹25,000, ವ್ಯಾಜ್ಯದ ಖರ್ಚು ವೆಚ್ಚಗಳ ಬಾಬ್ತು ₹10,000 ಪಾವತಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಶಿವಣ್ಣ, ಸದಸ್ಯರಾದ ಸವಿತಾ ಬಿ ಪಟ್ಟಣಶೆಟ್ಟೆ, ಬಿ.ಡಿ.ಯೋಗಾನಂದ ಭಾಂಡ್ಯ ಅವರ ಪೀಠವು ಇತ್ತೀಚೆಗೆ ಆದೇಶಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಸೇವಾ ನ್ಯೂನತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಅರ್ಜಿದಾರರಿಗೆ ವಿಮಾ ಮೊತ್ತ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.</p>.<p>ಅರ್ಜಿದಾರರಾದ ಸಿ.ಡಿ ರವಿರಾಜ್ ಅವರು ಎಚ್ಡಿಎಫ್ಸಿ-ಇಆರ್ಜಿಒ ಜನರಲ್ ಇನ್ಶೂರೆನ್ಸ್ ಕಂಪೆನಿ ವಿರುದ್ದ ಅರ್ಜಿ ಸಲ್ಲಿಸಿದ್ದರು.</p>.<p>ಅರ್ಜಿದಾರರು ಬಿಎಎಂಎಸ್ ವೈದ್ಯರಾಗಿದ್ದು, ಎಚ್ಡಿಎಫ್ಸಿ-ಇಆರ್ಜಿಒ ಜನರಲ್ ಇನ್ಶೂರೆನ್ಸ್ ಕಂಪೆನಿ ₹6 ಲಕ್ಷ ಪರಿಹಾರ ಮೊತ್ತವನ್ನು ಒಳಗೊಂಡ ಹೆಲ್ತ್ ಇನ್ಶೂರೆನ್ಸ್ ಪಾಲಿಸಿಯನ್ನು 2021ರಲ್ಲಿ ಪಡೆದಿದ್ದರು.</p>.<p>ಅರ್ಜಿದಾರರು 2021ರ ಆಗಸ್ಟ್ 2ರಂದು ಕೊರೊನಾ ಸೋಂಕಿಗೆ ಒಳಗಾಗಿ ಹಲವು ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಒಟ್ಟು ₹4,08,564 ವೆಚ್ಚವಾಗಿತ್ತು. ಅರ್ಜಿದಾರರು ವಿಮಾ ಕಂಪೆನಿಗೆ ವೈದ್ಯಕೀಯ ವೆಚ್ಚದ ಮರುಪಾವತಿ ಅರ್ಜಿ ಸಲ್ಲಿಸಿದಾಗ, ವಿಮಾ ಪರಿಹಾರ ನೀಡಲು ನಿರಾಕರಿಸಿದ್ದರು. ನಕಲಿ ದಾಖಲೆ ಸೃಷ್ಟಿಸಿ ತಪ್ಪಾಗಿ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದು ಕಾರಣ ನೀಡಿದ್ದರು. ಅಲ್ಲದೇ, ವಿಮಾ ಪಾಲಿಸಿಯನ್ನೂ ರದ್ದುಪಡಿಸಿದ್ದರು.</p>.<p>ಗ್ರಾಹಕರ ಆಯೋಗವು ಪ್ರಕರಣವನ್ನು ಪಕ್ಷಗಾರರು ಹಾಜರುಪಡಿಸಿದ ವೈದ್ಯಕೀಯ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿತು. ವಿಮಾ ಕಂಪೆನಿಯ ನಿರಾಕರಣೆಯು ಸೇವಾ ನ್ಯೂನತೆಯಿಂದ ಕೂಡಿದೆ ಎಂದು ತೀರ್ಮಾನಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸಿತು. </p>.<p>ವಿಮಾ ಕಂಪೆನಿಯು ಈ ಆದೇಶವಾದ 45 ದಿನಗಳೊಳಗಾಗಿ ಅರ್ಜಿದಾರರು ಪಡೆದಿದ್ದ ಪಾಲಿಸಿ ಪುನರುಜ್ಜೀವಗೊಳಿಸಬೇಕು ಹಾಗೂ ವಿಮಾ ಪರಿಹಾರ ಮೊತ್ತ ₹4,08,165 ಅನ್ನು ವಾರ್ಷಿಕ ಬಡ್ಡಿ ಶೇ 9 ಸಮೇತ ಪಾವತಿಸತಕ್ಕದ್ದು ಮತ್ತು ಮಾನಸಿಕ ಹಾನಿಗೆ ಪರಿಹಾರವಾಗಿ ₹25,000, ವ್ಯಾಜ್ಯದ ಖರ್ಚು ವೆಚ್ಚಗಳ ಬಾಬ್ತು ₹10,000 ಪಾವತಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಶಿವಣ್ಣ, ಸದಸ್ಯರಾದ ಸವಿತಾ ಬಿ ಪಟ್ಟಣಶೆಟ್ಟೆ, ಬಿ.ಡಿ.ಯೋಗಾನಂದ ಭಾಂಡ್ಯ ಅವರ ಪೀಠವು ಇತ್ತೀಚೆಗೆ ಆದೇಶಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>