<p><strong>ಶಿವಮೊಗ್ಗ:</strong> ನ್ಯಾ. ಎಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಮೇ 5ರಿಂದ ಆರಂಭಗೊಳ್ಳಲಿದೆ. ಮನೆ ಮನೆಗೆ ಬಂದು ಸಮೀಕ್ಷೆ ಮಾಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಬೇಡ ಜಂಗಮ ಸಮಾಜದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.</p>.<p>ಬೇಡ ಜಂಗಮ ಸಮಾಜ ರಾಜ್ಯದ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇದ್ದು, ಧಾರ್ಮಿಕ ಭಿಕ್ಷುಕ ಕುಲಕಸುಬು ವೃತ್ತಿಯ ಸಮಾಜವಾಗಿದ್ದು, ಈ ಸಮಾಜದ ಸಂಪೂರ್ಣ ಸಮೀಕ್ಷೆ ಕೂಡ ಅಷ್ಟೇ ಪ್ರಾಮುಖ್ಯವಾಗಿದೆ. ಸಮೀಕ್ಷೆ ಕಾರ್ಯ ನಿರ್ವಹಿಸುವ ಅಧಿಕಾರಿ/ ಸಿಬ್ಬಂದಿಗೆ ಈ ಸಮಾಜದ ಮನೆ ಮನೆಗೆ ಬಂದು ಸಮೀಕ್ಷೆ ನಡೆಸಲು ಸ್ಪಷ್ಟ ನಿರ್ದೇಶನ ನೀಡಬೇಕೆಂದು ಜಿಲ್ಲಾ ಬೇಡ ಜಂಗಮ ಸಮಾಜ ಮನವಿ ಮಾಡಿದೆ.</p>.<p>ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ವೇ. ಎಚ್. ಮಲ್ಲಿಕಾರ್ಜುನಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ಆರ್. ಸೋಮನಾಥ್, ಪ್ರಮುಖರಾದ ಎ.ಎಂ. ಚಂದ್ರಯ್ಯ, ಎಚ್.ಎಂ. ಸಂಗಯ್ಯ, ಶಿವಕುಮಾರ್, ಲೋಕೇಶ್ ದೊಡ್ಡಮಠ, ಸುನಂದಾ ಎಂ.ಕೆ., ಪ್ರೇಮಾ, ಜ್ಯೋತಿ ನಾಗರಾಜಯ್ಯ, ಸೋಮಶೇಖರಯ್ಯ ಮೊದಲಾದವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ನ್ಯಾ. ಎಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಮೇ 5ರಿಂದ ಆರಂಭಗೊಳ್ಳಲಿದೆ. ಮನೆ ಮನೆಗೆ ಬಂದು ಸಮೀಕ್ಷೆ ಮಾಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಬೇಡ ಜಂಗಮ ಸಮಾಜದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.</p>.<p>ಬೇಡ ಜಂಗಮ ಸಮಾಜ ರಾಜ್ಯದ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇದ್ದು, ಧಾರ್ಮಿಕ ಭಿಕ್ಷುಕ ಕುಲಕಸುಬು ವೃತ್ತಿಯ ಸಮಾಜವಾಗಿದ್ದು, ಈ ಸಮಾಜದ ಸಂಪೂರ್ಣ ಸಮೀಕ್ಷೆ ಕೂಡ ಅಷ್ಟೇ ಪ್ರಾಮುಖ್ಯವಾಗಿದೆ. ಸಮೀಕ್ಷೆ ಕಾರ್ಯ ನಿರ್ವಹಿಸುವ ಅಧಿಕಾರಿ/ ಸಿಬ್ಬಂದಿಗೆ ಈ ಸಮಾಜದ ಮನೆ ಮನೆಗೆ ಬಂದು ಸಮೀಕ್ಷೆ ನಡೆಸಲು ಸ್ಪಷ್ಟ ನಿರ್ದೇಶನ ನೀಡಬೇಕೆಂದು ಜಿಲ್ಲಾ ಬೇಡ ಜಂಗಮ ಸಮಾಜ ಮನವಿ ಮಾಡಿದೆ.</p>.<p>ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ವೇ. ಎಚ್. ಮಲ್ಲಿಕಾರ್ಜುನಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ಆರ್. ಸೋಮನಾಥ್, ಪ್ರಮುಖರಾದ ಎ.ಎಂ. ಚಂದ್ರಯ್ಯ, ಎಚ್.ಎಂ. ಸಂಗಯ್ಯ, ಶಿವಕುಮಾರ್, ಲೋಕೇಶ್ ದೊಡ್ಡಮಠ, ಸುನಂದಾ ಎಂ.ಕೆ., ಪ್ರೇಮಾ, ಜ್ಯೋತಿ ನಾಗರಾಜಯ್ಯ, ಸೋಮಶೇಖರಯ್ಯ ಮೊದಲಾದವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>