<p><strong>ಶಿವಮೊಗ್ಗ</strong>: ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಮಹಿಳಾ ಘಟಕದಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.</p>.<p>ಕಾರ್ಯಕ್ರಮವನ್ನು ಉದ್ಘಾಟಿಸಿದ ಮನೋವೈದ್ಯೆ ಡಾ.ಕೆ.ಎಸ್.ಪವಿತ್ರಾ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುವುದರಿಂದ ಒತ್ತಡದ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಒತ್ತಡರಹಿತ ಜೀವನ ನಡೆಸುವುದು ಅತ್ಯಂತ ಮುಖ್ಯ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅತಿಥಿ ಆಗಿದ್ದ ಸೌಮ್ಯಾ ಪ್ರಸಾದ್, ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯ ತೋರಿಸುತ್ತಿದ್ದಾರೆ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್, ಮಹಿಳಾ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೇ ಮಹಿಳೆಯರ ಸಮಸ್ಯೆಗಳು, ಹಕ್ಕುಗಳು ಹಾಗೂ ಸಾಧನೆಗಳನ್ನು ಚರ್ಚಿಸುವ ವೇದಿಕೆಯಾಗಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಧ್ಯಾಪಕಿ ಡಾ. ಜಯಲಕ್ಷ್ಮಿ ನಾರಾಯಣ ಹೆಗಡೆ, ಪ್ರತಿವರ್ಷ ವಿಶ್ವವಿದ್ಯಾಲಯದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ದಿನದ ಉದ್ದೇಶ ಮಹಿಳೆಯರ ಹಕ್ಕುಗಳು ಹಾಗೂ ಸಾಧನೆಗಳನ್ನು ಗೌರವಿಸುವುದಾಗಿದೆ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಮಹಿಳಾ ಘಟಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ವಿಸ್ತರಣಾ ನಿರ್ದೇಶಕ ಜಿ.ಕೆ. ಗಿರಿಜೇಶ್, ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಸಿ.ಜೆ. ಶ್ರೀಧರ್ , ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ನಾರಾಯಣ ಎಂ. ಮಾವರಕರ, ಡಾ.ಎಸ್.ವೈ.ಚಂದ್ರಶೇಖರ್, ಆಹಾರ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಜ್ಯೋತಿ ಎಂ. ರಾಥೋಡ್, ಹಣಕಾಸು ನಿಯಂತ್ರಣಾಧಿಕಾರಿ ಪ್ರಿಯಾಂಕಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಮಹಿಳಾ ಘಟಕದಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.</p>.<p>ಕಾರ್ಯಕ್ರಮವನ್ನು ಉದ್ಘಾಟಿಸಿದ ಮನೋವೈದ್ಯೆ ಡಾ.ಕೆ.ಎಸ್.ಪವಿತ್ರಾ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುವುದರಿಂದ ಒತ್ತಡದ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಒತ್ತಡರಹಿತ ಜೀವನ ನಡೆಸುವುದು ಅತ್ಯಂತ ಮುಖ್ಯ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅತಿಥಿ ಆಗಿದ್ದ ಸೌಮ್ಯಾ ಪ್ರಸಾದ್, ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯ ತೋರಿಸುತ್ತಿದ್ದಾರೆ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್, ಮಹಿಳಾ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೇ ಮಹಿಳೆಯರ ಸಮಸ್ಯೆಗಳು, ಹಕ್ಕುಗಳು ಹಾಗೂ ಸಾಧನೆಗಳನ್ನು ಚರ್ಚಿಸುವ ವೇದಿಕೆಯಾಗಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಧ್ಯಾಪಕಿ ಡಾ. ಜಯಲಕ್ಷ್ಮಿ ನಾರಾಯಣ ಹೆಗಡೆ, ಪ್ರತಿವರ್ಷ ವಿಶ್ವವಿದ್ಯಾಲಯದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ದಿನದ ಉದ್ದೇಶ ಮಹಿಳೆಯರ ಹಕ್ಕುಗಳು ಹಾಗೂ ಸಾಧನೆಗಳನ್ನು ಗೌರವಿಸುವುದಾಗಿದೆ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಮಹಿಳಾ ಘಟಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ವಿಸ್ತರಣಾ ನಿರ್ದೇಶಕ ಜಿ.ಕೆ. ಗಿರಿಜೇಶ್, ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಸಿ.ಜೆ. ಶ್ರೀಧರ್ , ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ನಾರಾಯಣ ಎಂ. ಮಾವರಕರ, ಡಾ.ಎಸ್.ವೈ.ಚಂದ್ರಶೇಖರ್, ಆಹಾರ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಜ್ಯೋತಿ ಎಂ. ರಾಥೋಡ್, ಹಣಕಾಸು ನಿಯಂತ್ರಣಾಧಿಕಾರಿ ಪ್ರಿಯಾಂಕಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>