<p>ಶಿಕಾರಿಪುರ: ಧಾರ್ಮಿಕ ಹಾಗೂ ಶಿಲ್ಪಕಲೆ ಕ್ಷೇತ್ರಕ್ಕೆ ಅಮರಶಿಲ್ಪಿ ಜಕಣಾಚಾರಿ ನೀಡಿದ ಕೊಡುಗೆ ಅಪಾರ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ವಿಶ್ವಕರ್ಮ ಸಮಾಜ ಆಶ್ರಯದಲ್ಲಿ ಶನಿವಾರ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೇಶದ ಶಿಲ್ಪಕಲೆಗೆ ಕೊಡುಗೆ ನೀಡುವಲ್ಲಿ ವಿಶ್ವಕರ್ಮ ಸಮಾಜದ ಪಾತ್ರ ಮಹತ್ವದ್ದು. ಜಕಣಾಚಾರಿ ಅವರು ತಮ್ಮ ಪ್ರತಿಭೆಯಿಂದ ಸುಂದರದೇವರ ಮೂರ್ತಿಗಳನ್ನು ಕೆತ್ತಿದ್ದಾರೆ. ಆ ಮೂರ್ತಿಗೆ ನಾವು ಇಂದು ಪೂಜೆ<br />ಸಲ್ಲಿಸುತ್ತಿದ್ದೇವೆ’ ಎಂದರು.</p>.<p>ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲಾ ಸಮಾಜಕ್ಕೂ ಗೌರವ ತರುವ ರೀತಿ ಆಡಳಿತ ನಡೆಸಿದ್ದು ಪ್ರಶಂಸನೀಯ ಎಂದರು.</p>.<p>ಉಪನ್ಯಾಸಕ ಕೆ.ಎಚ್. ಪುಟ್ಟಪ್ಪ, ‘ಜಕಣಾಚಾರಿ ಭೂಮಂಡಲಕ್ಕೆ ಪ್ರಧಾನ ಶಿಲ್ಪಿ. ಕಲ್ಲಿಗೆ ಜೀವ ಕೊಟ್ಟ ಮಹಾನ್ ಶಿಲ್ಪಿ’ ಎಂದು ಶ್ಲಾಘಿಸಿದರು.</p>.<p>ತಹಶೀಲ್ದಾರ್ ಎಂ.ಪಿ. ಕವಿರಾಜ್, ಎಪಿಎಂಸಿ ರಾಜ್ಯ ಉಪಾಧ್ಯಕ್ಷ ಚುರ್ಚಿಗುಂಡಿ ರುದ್ರಮುನಿ, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಾಸ್ವಾಮಿ, ಮುಖ್ಯಾಧಿಕಾರಿ ಸುರೇಶ್, ಉಪತಹಶೀಲ್ದಾರ್ ಮಂಜುನಾಥ್, ಬೆಳಗುತ್ತಿ ಮಠದ ಸರಳಮ್ಮ, ತಾಲ್ಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ಮಲ್ಲಿಕಾರ್ಜುನ್ ಆಚಾರ್, ಮುಖಂಡರು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಕಾರಿಪುರ: ಧಾರ್ಮಿಕ ಹಾಗೂ ಶಿಲ್ಪಕಲೆ ಕ್ಷೇತ್ರಕ್ಕೆ ಅಮರಶಿಲ್ಪಿ ಜಕಣಾಚಾರಿ ನೀಡಿದ ಕೊಡುಗೆ ಅಪಾರ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ವಿಶ್ವಕರ್ಮ ಸಮಾಜ ಆಶ್ರಯದಲ್ಲಿ ಶನಿವಾರ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೇಶದ ಶಿಲ್ಪಕಲೆಗೆ ಕೊಡುಗೆ ನೀಡುವಲ್ಲಿ ವಿಶ್ವಕರ್ಮ ಸಮಾಜದ ಪಾತ್ರ ಮಹತ್ವದ್ದು. ಜಕಣಾಚಾರಿ ಅವರು ತಮ್ಮ ಪ್ರತಿಭೆಯಿಂದ ಸುಂದರದೇವರ ಮೂರ್ತಿಗಳನ್ನು ಕೆತ್ತಿದ್ದಾರೆ. ಆ ಮೂರ್ತಿಗೆ ನಾವು ಇಂದು ಪೂಜೆ<br />ಸಲ್ಲಿಸುತ್ತಿದ್ದೇವೆ’ ಎಂದರು.</p>.<p>ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲಾ ಸಮಾಜಕ್ಕೂ ಗೌರವ ತರುವ ರೀತಿ ಆಡಳಿತ ನಡೆಸಿದ್ದು ಪ್ರಶಂಸನೀಯ ಎಂದರು.</p>.<p>ಉಪನ್ಯಾಸಕ ಕೆ.ಎಚ್. ಪುಟ್ಟಪ್ಪ, ‘ಜಕಣಾಚಾರಿ ಭೂಮಂಡಲಕ್ಕೆ ಪ್ರಧಾನ ಶಿಲ್ಪಿ. ಕಲ್ಲಿಗೆ ಜೀವ ಕೊಟ್ಟ ಮಹಾನ್ ಶಿಲ್ಪಿ’ ಎಂದು ಶ್ಲಾಘಿಸಿದರು.</p>.<p>ತಹಶೀಲ್ದಾರ್ ಎಂ.ಪಿ. ಕವಿರಾಜ್, ಎಪಿಎಂಸಿ ರಾಜ್ಯ ಉಪಾಧ್ಯಕ್ಷ ಚುರ್ಚಿಗುಂಡಿ ರುದ್ರಮುನಿ, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಾಸ್ವಾಮಿ, ಮುಖ್ಯಾಧಿಕಾರಿ ಸುರೇಶ್, ಉಪತಹಶೀಲ್ದಾರ್ ಮಂಜುನಾಥ್, ಬೆಳಗುತ್ತಿ ಮಠದ ಸರಳಮ್ಮ, ತಾಲ್ಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ಮಲ್ಲಿಕಾರ್ಜುನ್ ಆಚಾರ್, ಮುಖಂಡರು<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>