ಶಿಕಾರಿಪುರ:ಪಟ್ಟಣದ ಹುಚ್ಚರಾಯಸ್ವಾಮಿ ದೇವರ ಜಾತ್ರಾ ಮಹೋತ್ಸವ ಏಪ್ರಿಲ್ 15, 16ರಂದು ನಡೆಯಲಿದ್ದು, ಜಾತ್ರೆಯಲ್ಲಿ ಮಳಿಗೆ ಹಾಕಲು ಎಲ್ಲ ಧರ್ಮದವರಿಗೂ ಅವಕಾಶ ನೀಡಲಾಗಿದೆ. ‘ದೇವಸ್ಥಾನ ಆವರಣದಿಂದ ದೂರದಲ್ಲಿ ವಾಣಿಜ್ಯ ಮಳಿಗೆ ಹಾಗೂ ಮಕ್ಕಳ ಆಟಿಕೆ ಯಂತ್ರಗಳನ್ನು ಹಾಕಲು ಅವಕಾಶ ನೀಡಲಾಗಿದ್ದು, ಯಾವುದೇ ಧರ್ಮದವರಿಗೆ ನಿರ್ಬಂಧ ಹೇರಿಲ್ಲ. ಎಲ್ಲ ಧರ್ಮದವರು ವ್ಯಾಪಾರ ವಹಿವಾಟು ನಡೆಸಬಹುದು’ ಎಂದು ಜಾತ್ರಾ ಮಹೋತ್ಸವದ ಸಂಚಾಲಕ ಗುರುರಾಜ್ ರಾವ್ ಜಗತಾಪ್ ತಿಳಿಸಿದರು.