<p>ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು.</p>.<p>ಕೊರೊನಾ ಎರಡು ಅಲೆಗಳಿಂದ ಜನರು ಚೇತರಿಸಿಕೊಂಡಿಲ್ಲ. ಇದರ ನಡುವೆ ಮೂರನೇ ಅಲೆಯ ಆತಂಕವಿದೆ. ಲಸಿಕೆ ನೀಡುವ ಕಾರ್ಯ ಹಿಂದೆ ಉಳಿದಿದೆ. ಲಸಿಕೆ ಹಾಕಿಸಿಕೊಳ್ಳಲು ಪರದಾಡುವಂತಾಗಿದೆ. ಎಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ ಖಾಲಿಯಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ಆರೋಪಿಸಿದರು.</p>.<p>ಲಸಿಕೆ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ವಾರದ ಒಂದು ದಿನ ಆರೋಗ್ಯ ಕೇಂದ್ರದ ವ್ಯಾಪ್ತಿಯೊಳಗಿನ ಸಮುದಾಯ ಭವನ ಅಥವಾ ಶಾಲಾ, ಕಾಲೇಜುಗಳಲ್ಲಿ ಲಸಿಕೆ ನೀಡಬೇಕು. ಪ್ರತಿಯೊಬ್ಬರಿಗೂ ಲಸಿಕೆ ದೊರಕಿಸಲು ಆರೋಗ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಖಾಸಗಿ ಆಸ್ಪತ್ರೆಗಳಲ್ಲಿ ಸುಲಭವಾಗಿ ಸಿಗುವ ಲಸಿಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸಿದರು.</p>.<p>ನಗರ ಪಾಲಿಕೆ ಮಾಜಿ ಉಪ ಮೇಯರ್ ಎಚ್.ಪಾಲಾಕ್ಷಿ, ಮುಖಂಡ<br />ರಾದ ನರಸಿಂಹ ಗಂಧದಮನೆ, ಶ್ಯಾಮ್, ಅನಿಲ್ಕುಮಾರ್, ಸುಂದರ್, ವಿನಯ್, ಭಾಸ್ಕರ, ನವಿಲೆ ಮಂಜುನಾಥ್, ರಾಜಮ್ಮ, ಶಾಂತಾ ಸುರೇಂದ್ರ, ಕವಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು.</p>.<p>ಕೊರೊನಾ ಎರಡು ಅಲೆಗಳಿಂದ ಜನರು ಚೇತರಿಸಿಕೊಂಡಿಲ್ಲ. ಇದರ ನಡುವೆ ಮೂರನೇ ಅಲೆಯ ಆತಂಕವಿದೆ. ಲಸಿಕೆ ನೀಡುವ ಕಾರ್ಯ ಹಿಂದೆ ಉಳಿದಿದೆ. ಲಸಿಕೆ ಹಾಕಿಸಿಕೊಳ್ಳಲು ಪರದಾಡುವಂತಾಗಿದೆ. ಎಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ ಖಾಲಿಯಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ಆರೋಪಿಸಿದರು.</p>.<p>ಲಸಿಕೆ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ವಾರದ ಒಂದು ದಿನ ಆರೋಗ್ಯ ಕೇಂದ್ರದ ವ್ಯಾಪ್ತಿಯೊಳಗಿನ ಸಮುದಾಯ ಭವನ ಅಥವಾ ಶಾಲಾ, ಕಾಲೇಜುಗಳಲ್ಲಿ ಲಸಿಕೆ ನೀಡಬೇಕು. ಪ್ರತಿಯೊಬ್ಬರಿಗೂ ಲಸಿಕೆ ದೊರಕಿಸಲು ಆರೋಗ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಖಾಸಗಿ ಆಸ್ಪತ್ರೆಗಳಲ್ಲಿ ಸುಲಭವಾಗಿ ಸಿಗುವ ಲಸಿಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸಿದರು.</p>.<p>ನಗರ ಪಾಲಿಕೆ ಮಾಜಿ ಉಪ ಮೇಯರ್ ಎಚ್.ಪಾಲಾಕ್ಷಿ, ಮುಖಂಡ<br />ರಾದ ನರಸಿಂಹ ಗಂಧದಮನೆ, ಶ್ಯಾಮ್, ಅನಿಲ್ಕುಮಾರ್, ಸುಂದರ್, ವಿನಯ್, ಭಾಸ್ಕರ, ನವಿಲೆ ಮಂಜುನಾಥ್, ರಾಜಮ್ಮ, ಶಾಂತಾ ಸುರೇಂದ್ರ, ಕವಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>