ಶಿವಮೊಗ್ಗ: ಆ.25ರಂದು ನಿಗದಿಯಾಗಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪ್ರವಾಸ ರದ್ದಾಗಿದೆ.
ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಆ.25ರಂದು ಜೆಡಿಎಸ್ ಹಮ್ಮಿಕೊಂಡಿದ್ದ ಕೃಷಿ ಉತ್ಪನ್ನ ಮಾರುಕಟ್ಟೆ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳ ವಿರುದ್ಧ ಜನಜಾಗೃತಿ ವಿಚಾರ ಸಂಕೀರ್ಣದಲ್ಲಿ ಅವರು ಭಾಗವಹಿಸಬೇಕಿತ್ತು.
ದೇವೇಗೌಡರ ಪ್ರವಾಸ ರದ್ದಾಗಿದೆ. ಹಾಗಾಗಿ, ಅಂದಿನ ವಿಚಾರ ಸಂಕಿರಣವನ್ನೂ ಮುಂದೂಡಲಾಗಿದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ತಿಳಿಸಿದ್ದಾರೆ.