<p><strong>ರಿಪ್ಪನ್ಪೇಟೆ: </strong>ಕಾಂಗ್ರೆಸ್ ಸಖ್ಯ ಬಯಸಿ ಆರ್.ಎಂ. ಮಂಜುನಾಥಗೌಡ ಜೆಡಿಎಸ್ ತೊರೆದಿದ್ದು, ಇದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು.</p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಧಿಕಾರದ ದಾಹ, ಸ್ವಾರ್ಥ ರಾಜಕಾರಣ ಬಯಸುವವರಿಂದ ಜೆಡಿಎಸ್ ಪಕ್ಷಕ್ಕೆ ಲಾಭವಿಲ್ಲ. ಇದಕ್ಕೆ ಈಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯೇ ಸಾಕ್ಷಿ’ ಎಂದರು.</p>.<p>‘ರಾಷ್ಟ್ರೀಯ ಮುಖಂಡರು ಮೂಲ ಕಾರ್ಯಕರ್ತರಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಹಾಗೆ ಬಂದು ಹೀಗೆ ಹೋಗುವ ವಲಸಿಗರಿಗೆ ಪಕ್ಷದ ಸಾರಥ್ಯದ ಹೊಣೆಗಾರಿಕೆ ಮುಂದಿನ ದಿನಗಳಲ್ಲಿ ನೀಡಬಾರದು’ ಎಂದು ಎಚ್ಚರಿಸಿದರು.</p>.<p>ಪಕ್ಷದ ಮುಖಂಡ ಆರ್.ಎನ್. ಮಂಜುನಾಥ, ರೈತ ಮುಖಂಡ ಮುಡಬ ಧರ್ಮಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ: </strong>ಕಾಂಗ್ರೆಸ್ ಸಖ್ಯ ಬಯಸಿ ಆರ್.ಎಂ. ಮಂಜುನಾಥಗೌಡ ಜೆಡಿಎಸ್ ತೊರೆದಿದ್ದು, ಇದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು.</p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಧಿಕಾರದ ದಾಹ, ಸ್ವಾರ್ಥ ರಾಜಕಾರಣ ಬಯಸುವವರಿಂದ ಜೆಡಿಎಸ್ ಪಕ್ಷಕ್ಕೆ ಲಾಭವಿಲ್ಲ. ಇದಕ್ಕೆ ಈಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯೇ ಸಾಕ್ಷಿ’ ಎಂದರು.</p>.<p>‘ರಾಷ್ಟ್ರೀಯ ಮುಖಂಡರು ಮೂಲ ಕಾರ್ಯಕರ್ತರಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಹಾಗೆ ಬಂದು ಹೀಗೆ ಹೋಗುವ ವಲಸಿಗರಿಗೆ ಪಕ್ಷದ ಸಾರಥ್ಯದ ಹೊಣೆಗಾರಿಕೆ ಮುಂದಿನ ದಿನಗಳಲ್ಲಿ ನೀಡಬಾರದು’ ಎಂದು ಎಚ್ಚರಿಸಿದರು.</p>.<p>ಪಕ್ಷದ ಮುಖಂಡ ಆರ್.ಎನ್. ಮಂಜುನಾಥ, ರೈತ ಮುಖಂಡ ಮುಡಬ ಧರ್ಮಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>