<p><strong>ಕಾರ್ಗಲ್: </strong>ಕೊರೊನಾದಿಂದ ಉದ್ಯೋಗ ಕಳೆದುಕೊಂಡು ಜೋಗದ ರಾಣಿ ಜಲಪಾತದ ನೆತ್ತಿಯ ಮೇಲೆ ಕುಳಿತು ಬುಧವಾರ ಆತ್ಮಹತ್ಯೆಗೆ ಪ್ರಯತ್ನಿಸಿದ ಬೆಂಗಳೂರಿನ ಟೆಕ್ಕಿಯ ಮನವೊಲಿಸಿದ ಜೋಗ ಪೊಲೀಸರು ಅವರನ್ನು ರಕ್ಷಣೆ ಮಾಡಿದ್ದಾರೆ.</p>.<p>ಬುಧವಾರ ಬೆಳಿಗ್ಗೆ 11ಕ್ಕೆ ಜೋಗ ಜಲಪಾತಕ್ಕೆ ಬಂದ ಬೆಂಗಳೂರು ಸಿ.ವಿ. ರಾಮನ್ ನಗರದ ಬ್ಯಾಗ್ಮನಿ ಟೆಕ್ಪಾರ್ಕ್ನ ಟೆಕ್ಕಿ ಚೇತನ್ ಕುಮಾರ್ ಸೀತಾಕಟ್ಟೆ ಸೇತುವೆಯ ಕೆಳಭಾಗದಿಂದ ಪ್ರಾಧಿಕಾರದ ಭದ್ರತಾ ಪಡೆಯ ಕಣ್ತಪ್ಪಿಸಿ ರಾಣಿ ಜಲಪಾತದ ನೆತ್ತಿಯ ಬಳಿಗೆ ನುಸುಳಿಕೊಂಡು ಹೋಗಿದ್ದಾರೆ. ಮೊಬೈಲ್, ಲಗೇಜ್ ಬ್ಯಾಗ್ ಎಲ್ಲವನ್ನೂ 960 ಅಡಿ ಆಳದ ಪ್ರಪಾತಕ್ಕೆ ಎಸೆದು, ಇನ್ನೇನು ಒಂದು ಹೆಜ್ಜೆ ಇಟ್ಟರೆ ಪ್ರಪಾತಕ್ಕೆ ಬೀಳುವ ಅಪಾಯಕಾರಿ ಪ್ರದೇಶದ ಬಂಡೆಯ ಮೇಲೆ ಸುಮ್ಮನೆ ಕುಳಿತು ಬಿಟ್ಟಿದ್ದಾರೆ.</p>.<p>ಜಲಪಾತ ಏರಿ ಕುಳಿತಿರುವುದನ್ನುವಿಸ್ಡಂ ಭದ್ರತಾ ಪಡೆಯ ಮೇಲ್ವಿಚಾರಕ ಸಂತೋಷ್ ಗಮನಿಸಿ, ಮೇಲಾಧಿಕಾರಿ ನಿ. ಸರ್ಜಂಟ್ ನಿಸಾರ್ ಅವರಿಗೆ ಮಾಹಿತಿ ನೀಡಿದರು.</p>.<p>ಮಧ್ಯಾಹ್ನ 2ರ ಹೊತ್ತಿಗೆ ಸಾಗರ ಡಿವೈಎಸ್ಪಿ ವಿನಾಯಕ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸ್, ವಿಪತ್ತು ಕಾರ್ಯನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ಪಡೆ ಸಿಬ್ಬಂದಿ ಚೇತನ್ ಕುಮಾರ್ ಅವರನ್ನು ದೂರದಿಂದಲೇ ಮಾತನಾಡಿಸಿ ಹಿಂದೆ ಬರುವಂತೆ ಮನವೊಲಿಸಿದರು. ಮದ್ಯಾಹ್ನ 3ರ ಹೊತ್ತಿಗೆ ಚೇತನ್ ಕುಮಾರ್ ಹಿಂದಿರುಗಿ ಬಂದರು.</p>.<p>ಕೊರೊನಾ ಸಂಕಷ್ಟದಿಂದ ಉದ್ಯೋಗ ಕಳೆದುಕೊಂಡು, ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಮುಂದಾಗಿರುವುದಾಗಿ ಚೇತನ್ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೋಗ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು, ಅಗ್ನಿಶಾಮಕ ದಳ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಗಲ್: </strong>ಕೊರೊನಾದಿಂದ ಉದ್ಯೋಗ ಕಳೆದುಕೊಂಡು ಜೋಗದ ರಾಣಿ ಜಲಪಾತದ ನೆತ್ತಿಯ ಮೇಲೆ ಕುಳಿತು ಬುಧವಾರ ಆತ್ಮಹತ್ಯೆಗೆ ಪ್ರಯತ್ನಿಸಿದ ಬೆಂಗಳೂರಿನ ಟೆಕ್ಕಿಯ ಮನವೊಲಿಸಿದ ಜೋಗ ಪೊಲೀಸರು ಅವರನ್ನು ರಕ್ಷಣೆ ಮಾಡಿದ್ದಾರೆ.</p>.<p>ಬುಧವಾರ ಬೆಳಿಗ್ಗೆ 11ಕ್ಕೆ ಜೋಗ ಜಲಪಾತಕ್ಕೆ ಬಂದ ಬೆಂಗಳೂರು ಸಿ.ವಿ. ರಾಮನ್ ನಗರದ ಬ್ಯಾಗ್ಮನಿ ಟೆಕ್ಪಾರ್ಕ್ನ ಟೆಕ್ಕಿ ಚೇತನ್ ಕುಮಾರ್ ಸೀತಾಕಟ್ಟೆ ಸೇತುವೆಯ ಕೆಳಭಾಗದಿಂದ ಪ್ರಾಧಿಕಾರದ ಭದ್ರತಾ ಪಡೆಯ ಕಣ್ತಪ್ಪಿಸಿ ರಾಣಿ ಜಲಪಾತದ ನೆತ್ತಿಯ ಬಳಿಗೆ ನುಸುಳಿಕೊಂಡು ಹೋಗಿದ್ದಾರೆ. ಮೊಬೈಲ್, ಲಗೇಜ್ ಬ್ಯಾಗ್ ಎಲ್ಲವನ್ನೂ 960 ಅಡಿ ಆಳದ ಪ್ರಪಾತಕ್ಕೆ ಎಸೆದು, ಇನ್ನೇನು ಒಂದು ಹೆಜ್ಜೆ ಇಟ್ಟರೆ ಪ್ರಪಾತಕ್ಕೆ ಬೀಳುವ ಅಪಾಯಕಾರಿ ಪ್ರದೇಶದ ಬಂಡೆಯ ಮೇಲೆ ಸುಮ್ಮನೆ ಕುಳಿತು ಬಿಟ್ಟಿದ್ದಾರೆ.</p>.<p>ಜಲಪಾತ ಏರಿ ಕುಳಿತಿರುವುದನ್ನುವಿಸ್ಡಂ ಭದ್ರತಾ ಪಡೆಯ ಮೇಲ್ವಿಚಾರಕ ಸಂತೋಷ್ ಗಮನಿಸಿ, ಮೇಲಾಧಿಕಾರಿ ನಿ. ಸರ್ಜಂಟ್ ನಿಸಾರ್ ಅವರಿಗೆ ಮಾಹಿತಿ ನೀಡಿದರು.</p>.<p>ಮಧ್ಯಾಹ್ನ 2ರ ಹೊತ್ತಿಗೆ ಸಾಗರ ಡಿವೈಎಸ್ಪಿ ವಿನಾಯಕ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸ್, ವಿಪತ್ತು ಕಾರ್ಯನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ಪಡೆ ಸಿಬ್ಬಂದಿ ಚೇತನ್ ಕುಮಾರ್ ಅವರನ್ನು ದೂರದಿಂದಲೇ ಮಾತನಾಡಿಸಿ ಹಿಂದೆ ಬರುವಂತೆ ಮನವೊಲಿಸಿದರು. ಮದ್ಯಾಹ್ನ 3ರ ಹೊತ್ತಿಗೆ ಚೇತನ್ ಕುಮಾರ್ ಹಿಂದಿರುಗಿ ಬಂದರು.</p>.<p>ಕೊರೊನಾ ಸಂಕಷ್ಟದಿಂದ ಉದ್ಯೋಗ ಕಳೆದುಕೊಂಡು, ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಮುಂದಾಗಿರುವುದಾಗಿ ಚೇತನ್ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೋಗ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು, ಅಗ್ನಿಶಾಮಕ ದಳ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>