ವರ್ಷದ ಹಿಂದೆ ನಡೆದ ಚುನಾವಣೆಯಲ್ಲಿ ಕ್ಷೇತ್ರದ ಶಾಸಕ ಎಚ್. ಹಾಲಪ್ಪ ಹರತಾಳು ಅವರ ಪ್ರಭಾವ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಜಂಟಿಯಾಗಿ ಪಟ್ಟಣ ಪಂಚಾಯಿತಿಯ ಅಧಿಕಾರವನ್ನು ಹಿಡಿಯಲು ಅವಿರತವಾಗಿ ಶ್ರಮಿಸಿದ ಫಲವಾಗಿ ಒಟ್ಟು 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಬಿಜೆಪಿ ತೆಕ್ಕೆಗೆ ಸೆಳೆದುಕೊಂಡಿತ್ತು. ಒಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿ ಪಕ್ಷೇತರರಾಗಿ ಗೆಲುವು ಪಡೆದು, ನಂತರ ಬಿಜೆಪಿಗೆ ಬೆಂಬಲ ಘೋಷಿಸಿ, ಸೇರ್ಪಡೆಯಾಗಿದ್ದರು. ಇದರಿಂದ ಒಟ್ಟು 10 ಸದಸ್ಯ ಬಲವನ್ನು ಬಿಜೆಪಿ ಪಡೆದು ಪಡೆದು ಬೀಗುತ್ತಿದ್ದರೆ, ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಪಡೆದು ಅಸ್ತಿತ್ವ ಉಳಿಸಿಕೊಂಡಿದೆ.