ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು 14 ದಿನ ತಮ್ಮ ಬಾಯಿಗಳಿಗೆ ಬೀಗ ಹಾಕಿಕೊಂಡರೆ ಲಾಕ್ಡೌನ್ ಸಂಪೂರ್ಣ ಯಶಸ್ವಿಯಾಗುತ್ತದೆ. ಎಲ್ಲೋ ಎ.ಸಿ. ಕೊಠಡಿಗಳಲ್ಲಿ ಕುಳಿತು ಅನಗತ್ಯ ಟೀಕೆ ಮಾಡುವುದು ವಿರೋಧ ಪಕ್ಷಗಳ ನಾಯಕರಿಗೆ ಶೋಭೆ ತರುವುದಿಲ್ಲ. ಸಿದ್ದರಾಮಯ್ಯ ಹೇಳಿದಂತೆ ₹ 10 ಸಾವಿರ ಕೊಡಲು ಸಾಧ್ಯವಿಲ್ಲ ಎಂದು ಕುಟುಕಿದರು.